2 ಹಂತದಲ್ಲಿ ಔರಾದ್ಕರ್ ವರದಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಮೊದಲ ಹಂತದಲ್ಲಿ ಕಾನ್ಸ್ಟೆಬಲ್, ಹೆಡ್ ಕಾನ್ಸ್ಟೆಬಲ್, ಪಿಎಸ್ಐ, ಸರ್ಕಲ್ ಇನ್ಸ್ಪೆಕ್ಟರ್ಗಳನ್ನು ಸೇರಿಸಲಾಗಿತ್ತು. ಆದರೆ, ಕಾರಾಗೃಹ ಸಿಬ್ಬಂದಿ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸೇರಿರಲಿಲ್ಲ. ಇದೀಗ ಎರಡನೇ ಹಂತದಲ್ಲಿ ಅವರನ್ನೂ ಸೇರಿಸಿ ವರದಿಗೆ ಒಪ್ಪಿಗೆ ನೀಡಲಾಗಿದೆ. ವರದಿ ಜಾರಿಗೆ ಆರ್ಥಿಕ ಇಲಾಖೆ ಕೆಲವು ಸ್ಪಷ್ಟನೆಗಳನ್ನು ಕೇಳಿದ್ದು, ನೀಡಲಾಗಿದೆ. ವಾರದೊಳಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದರು.