ಬೆಂಗಳೂರು: ಕೊಡಗಿನ ಪ್ರವಾಹ ಸಂತ್ರಸ್ತರಿಗೆ ಮದೆ ಹಾಗೂ ಜಂಬೂರಿನಲ್ಲಿ ಮನೆಗಳ ನಿರ್ಮಾಣಕ್ಕೆ ನಾನು ಮುಖ್ಯಮಂತ್ರಿ ಆಗಿದ್ದಾಗ ಚಾಲನೆ ನೀಡಿ, ಹಣ ಒದಗಿಸಿದ್ದೆ. ಇಂದು 463 ಮನೆಗಳು ಪೂರ್ಣವಾಗಿದ್ದು ಸಂತ್ರಸ್ತರಿಗೆ ಸೂರು ಸಿಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಕುಮಾರಸ್ವಾಮಿ ಅವರು,ಅಂದು ಸಂತ್ರಸ್ತರ ನೋವನ್ನು ಸ್ವತಃ ನಾನೂ ಉಂಡಿದ್ದೆ. ಇಂದಿನ ಅವರ ಖುಷಿ ನನ್ನದೂ ಕೂಡ. ನಮ್ಮ ಕೆಲಸಗಳು ಮಾತಾಡಬೇಕು. ಮಾತಾಡುತ್ತಿವೆ ಎಂದು ಮನೆಯ ಚಿತ್ರವನ್ನು ಪ್ರಕಟಿಸಿದ್ದಾರೆ.
ಕೊಡಗಿನ ಪ್ರವಾಹ ಸಂತ್ರಸ್ತರಿಗೆ ಮದೆ ಹಾಗೂ ಜಂಬೂರಿನಲ್ಲಿ ಮನೆಗಳ ನಿರ್ಮಾಣಕ್ಕೆ ನಾನು CM ಆಗಿದ್ದಾಗ ಚಾಲನೆ ನೀಡಿ, ಹಣ ಒದಗಿಸಿದ್ದೆ. ಇಂದು 463 ಮನೆಗಳು ಪೂರ್ಣವಾಗಿದ್ದು ಸಂತ್ರಸ್ತರಿಗೆ ಸೂರು ಸಿಗುತ್ತಿದೆ. ಅಂದು ಸಂತ್ರಸ್ತರ ನೋವನ್ನು ಸ್ವತಃ ನಾನೂ ಉಂಡಿದ್ದೆ. ಇಂದಿನ ಅವರ ಖುಷಿ ನನ್ನದೂ ಕೂಡ. ನಮ್ಮ ಕೆಲಸಗಳು ಮಾತಾಡಬೇಕು. ಮಾತಾಡುತ್ತಿವೆ... pic.twitter.com/nrtxIrxt5I