ಮುಖ್ಯಮಂತ್ರಿ ಗೃಹಕಚೇರಿಯಲ್ಲಿ ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಪರಿಣಾಮ ಮುಖ್ಯಮಂತ್ರಿ ಕ್ವಾರಂಟೈನ್ಗೆ ಒಳಗಾಗಿದ್ದು, ಬಿಡುವಿನ ವೇಳೆಯಲ್ಲಿ ನನಗೆ ಅತ್ಯಂತ ಪ್ರಿಯವಾದ ಕಾಲಕ್ಷೇಪವೆಂದರೆ ಓದುವುದು. ನೂರಾರು ಸಂಗತಿಗಳ ಬಗ್ಗೆ ತಿಳಿದಷ್ಟೂ ತಿಳಿಯಬಹುದಾದ ವಿಷಯಗಳಿವೆ, ಜ್ಞಾನಾರ್ಜನೆ ಎಂದೂ ಮುಗಿಯದ ಕಾಯಕ. ಇಂದಿನ ಭಾನುವಾರದ ಲಾಕ್ ಡೌನ್ ಮತ್ತು ಸ್ವ-ಕ್ವಾರಂಟೈನ್ನಲ್ಲಿರುವ ವೇಳೆ ಸಿಕ್ಕ ಸ್ವಲ್ಪ ಬಿಡುವಿನ ಸಮಯವನ್ನು ಖಾಂಡೇಕರ್ ಅವರ ಯಯಾತಿಯ ಜೊತೆಗೆ ಕಳೆಯುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.