ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಬಗ್ಗೆಯೂ ಸಿಬಿಐ ತನಿಖೆಗೆ ವಹಿಸುವುದು ಒಳ್ಳೆಯದು. ಚಾರಿತ್ರ್ಯವಧೆ ಮಾಡುತ್ತಿದ್ದಾರೋ ಅಥವಾ ಅದರಲ್ಲಿ ಸತ್ಯಾಂಶ ಇದೆಯೋ ಎನ್ನುವುದನ್ನು ಜನರಿಗೆ ಗೊತ್ತು ಮಾಡಿಸಬೇಕು’ ಎಂದು ಒತ್ತಾಯಿಸಿದರು.