ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹನಿಟ್ರ್ಯಾಪ್‌ನಲ್ಲಿರುವ ದನಿ ಸಾಹುಕಾರ್‌ದಿದ್ದಂತಿದೆ: ಕುಮಾರಸ್ವಾಮಿ

Last Updated 2 ಡಿಸೆಂಬರ್ 2019, 9:31 IST
ಅಕ್ಷರ ಗಾತ್ರ

ಬೆಳಗಾವಿ: ‘ಅನರ್ಹ ಶಾಸಕರ ಹನಿಟ್ರ್ಯಾಪ್‌ ಪ್ರಕರಣದಲ್ಲಿ ಮಹಿಳೆಯೊಂದಿಗೆ ಅಶ್ಲೀಲವಾಗಿ ಮಾತನಾಡಿರುವ ವ್ಯಕ್ತಿಯ ದನಿ ಸಾಹುಕಾರ್‌ದಿದ್ದಂತಿದೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಬಗ್ಗೆಯೂ ಸಿಬಿಐ ತನಿಖೆಗೆ ವಹಿಸುವುದು ಒಳ್ಳೆಯದು. ಚಾರಿತ್ರ್ಯವಧೆ ಮಾಡುತ್ತಿದ್ದಾರೋ ಅಥವಾ ಅದರಲ್ಲಿ ಸತ್ಯಾಂಶ ಇದೆಯೋ ಎನ್ನುವುದನ್ನು ಜನರಿಗೆ ಗೊತ್ತು ಮಾಡಿಸಬೇಕು’ ಎಂದು ಒತ್ತಾಯಿಸಿದರು.

‘ಮಹಿಳೆಯರ ಬಗ್ಗೆ ಗೌರವವಿಲ್ಲದೇ, ಬಹಳ ಅಶ್ಲೀಲವಾಗಿ ಮಾತನಾಡಿರುವುದು ಆಡಿಯೊದಲ್ಲಿದೆ. ಅಂಥವರನ್ನು ಬಿಜೆಪಿಯವರು ಚುನವಣೆಯಲ್ಲಿ ನಿಲ್ಲಿಸಿ ಗೆಲ್ಲಿಸಿಕೊಳ್ಳಲು ಹೊರಟಿದ್ದಾರೆ. ರಾಜ್ಯದ ಜನರು ಇದನ್ನು ಅರಿತುಕೊಳ್ಳಬೇಕು’ ಎಂದರು.

ಯಾವ ಸಾಹುಕಾರ್‌ ಎನ್ನುವುದನ್ನು ಅವರು ಸ್ಪಷ್ಟವಾಗಿ ಹೇಳಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT