ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನಗೆ ಯಾಕೆ ಮಂತ್ರಿ ಸ್ಥಾನ ನೀಡಿಲ್ಲ ಹಾಗೂ ಸಭಾಪತಿ ಸ್ಥಾನ ನೀಡಲಿಲ್ಲ ಎಂಬುದು ನನಗೂ ಗೊತ್ತಾಗುತ್ತಿಲ್ಲ. ನಾನು ಅದಕ್ಕಾಗಿ ಲಾಬಿ ಮಾಡಿಲ್ಲ. ಸಚಿವ ಸ್ಥಾನ ನೀಡಿದ್ದರೆ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಸ್ಪಂದಿಸಿ ಅಭಿವೃದ್ಧಿ ಕಾರ್ಯಮಾಡುವ ಹಂಬಲವಿತ್ತು. ಈಗ ಪ್ರತಿಭೆ, ಅನುಭವ, ಪ್ರಾಮಾಣಿಕತೆಗೆ ಬೆಲೆ ಸಿಗುತ್ತಿಲ್ಲ’ ಎಂದು ನೋವು ಹೊರಹಾಕಿದರು.