ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ: ವೃದ್ಧೆ ಸಾವು

Last Updated 10 ನವೆಂಬರ್ 2018, 19:54 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹೋಗಿದ್ದ ವೃದ್ಧೆಯನ್ನು ಆಸ್ಪತ್ರೆಯ ಎದುರಿನ ಚಿಕ್ಕಬಳ್ಳಾಪುರ- ಮುಖ್ಯರಸ್ತೆಯಲ್ಲಿ ನಾಲ್ಕು ದಿನಗಳ ಹಿಂದೆ ಬಿಟ್ಟು ಹೋಗಿದ್ದು, ಅವರು ಶನಿವಾರ ರಸ್ತೆಯ ಬದಿಯಲ್ಲೇ ನರಳಿಸಾವನ್ನಪ್ಪಿದ್ದಾರೆ.

ಮೃತರನ್ನು ತಾಲ್ಲೂಕಿನ ನೇರಳೆಘಟ್ಟ ಗ್ರಾಮದ ನಿವಾಸಿ ಕಾಂತಮ್ಮ (65) ಎಂದು ಗುರುತಿಸಲಾಗಿದೆ. ನಾಲ್ಕು ದಿನಗಳ ಹಿಂದೆ ಕಾಯಿಲೆಯಿಂದ ನರಳುತ್ತಿರುವಾಗ ಅವರನ್ನು ಸ್ಥಳೀಯರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರು.

‘ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಅವರನ್ನು ನೋಡಿಕೊಳ್ಳಲು ಆಸ್ಪತ್ರೆಗೆ ಯಾರೂ ಬಾರದ ಕಾರಣ ಈ ಪ್ರಕರಣ ನಡೆದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ‘ವೃದ್ಧೆಯನ್ನು ನೋಡಿಕೊಳ್ಳಲು, ಗಲೀಜು ಮಾಡಿಕೊಂಡಾಗಸ್ವಚ್ಛ ಮಾಡುವವರು ಯಾರೂ ಇಲ್ಲ ಎಂಬ ಕಾರಣಕ್ಕೆ ಸಿಬ್ಬಂದಿ ಅವರನ್ನು ಆಸ್ಪತ್ರೆ ಹೊರವಲಯದ ಚರಂಡಿ ಪಕ್ಕದಲ್ಲಿ ಮಲಗಿಸಿತೆರಳಿದ್ದರು. ರಸ್ತೆ ಬದಿಯಲ್ಲಿದ್ದು ಬಿಸಿಲು, ಚಳಿ, ಗಾಳಿಗೆ ತೀವ್ರವಾಗಿ ನರಳಿ ಅವರು ಅಸುನೀಗಿದ್ದಾರೆ’ ಎಂದು ಸ್ಥಳೀಯರುತಿಳಿಸಿದ್ದಾರೆ.

ಮಾಹಿತಿ ಇಲ್ಲ: ‘ನಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವೃದ್ಧೆ ಮನೆಗೆ ತೆರಳುವುದಾಗಿ ತಿಳಿಸಿದ್ದರು. ವೃದ್ಧೆಯನ್ನು ರಸ್ತೆಬದಿಯಲ್ಲಿ ಬಿಟ್ಟದ್ದು ತಿಳಿದಿಲ್ಲ. ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ.ಮಂಜುನಾಥ್ ತಿಳಿಸಿದ್ದಾರೆ.

ತಹಶೀಲ್ದಾರ್ ಬಿ.ಎ.ಮೋಹನ್ ಮಾತನಾಡಿ, ‘ಇದು ನಾಗರಿಕ ಸಮಾಜ ತಲೆತಗ್ಗಿಸುವ ಕೃತ್ಯವಾಗಿದೆ. ಘಟನೆಗೆ ಸಂಬಂಧಿಸಿದವರವಿರುದ್ಧ ಶಿಸ್ತು ಕ್ರಮತೆಗೆದುಕೊಳ್ಳುತ್ತೇವೆ’ ಎಂದು ಹೇಳಿದರು.

ಕರವೇ ಪ್ರತಿಭಟನೆ: ಪ್ರಕರಣ ತಿಳಿದ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಸರ್ಕಾರಿ ಆಸ್ಪತ್ರೆ ಮತ್ತು ತಾಲ್ಲೂಕು, ಜಿಲ್ಲಾ ವೈದ್ಯಾಧಿಕಾರಿ ವಿರುದ್ಧ ಕೂಡಲೇತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT