2019ರ ಡಿಸೆಂಬರ್ನಲ್ಲಿ ಸಿದ್ದರಾಮಯ್ಯ ಕಾಗವಾಡದಲ್ಲಿ ಉಪಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದಾಗ ‘ಇಂದಿರಾಗಾಂಧಿ ದೇಶಕ್ಕೋಸ್ಕರ ಪ್ರಾಣ ತೆತ್ತರು’ ಎನ್ನುತ್ತಿದ್ದಂತೆಯೇ, ಜನರ ಸಾಲಿನಲ್ಲಿದ್ದ ಪೀರಪ್ಪ ‘ಹೌದೋ ಹುಲಿಯಾ’ ಎಂದಿದ್ದರು. ಇದು ದೃಶ್ಯ ಮಾಧ್ಯಮಗಳಲ್ಲಿ, ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಬಳಿಕ ಸಿದ್ದರಾಮಯ್ಯ ಹೃದಯದ ಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿರುವ ವೇಳೆ ಅವರನ್ನು ಭೆಟಿಯಾಗಿ ಆರೋಗ್ಯವನ್ನೂ ವಿಚಾರಿಸಿದ್ದರು ಪೀರಪ್ಪ. ಈ ಕುರಿತು ಸಿದ್ದರಾಮಯ್ಯ ಅವರೇ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು.