‘ಮೈತ್ರಿ’ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಅವರು ಸೋಮವಾರಪೇಟೆ ತಾಲ್ಲೂಕಿನ ಜಂಬೂರಿನಲ್ಲಿ ಕಳೆದ ಡಿಸೆಂಬರ್ನಲ್ಲಿ ಮನೆ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಎರಡು ಮಲಗುವ ಕೋಣೆಗಳುಳ್ಳ ಪ್ರತಿ ಮನೆಗೆ ₹ 9.85 ಲಕ್ಷ ವೆಚ್ಚ ಮಾಡಲಾಗಿದೆ. ಮಾದಾಪುರ, ಮಡಿಕೇರಿ, ಉದಯಗಿರಿಯ ಸಂತ್ರಸ್ತ ಕುಟುಂಬಗಳಿಗೆ ಕರ್ಣಂಗೇರಿಯಲ್ಲಿ ಸೂರು ಕಲ್ಪಿಸಲಾಯಿತು.