‘ಪ್ರಕರಣದ ಸಮಗ್ರ ತನಿಖೆಗಾಗಿ ನೇಮಿಸಿದ್ದ ಹಾಸನ ಉಪವಿಭಾಗಾಧಿಕಾರಿ ನೇತೃತ್ವದ ತನಿಖಾ ಸಮಿತಿಯು 414 ಮಂಜೂರಾತಿ (1,654 ಎಕರೆ) ರದ್ದುಪಡಿಸಿ, ಜಮೀನನ್ನು ಅಕ್ರಮವಾಗಿ ಮಾಡಿಸಿಕೊಂಡಿರುವ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಯೋಜನೆ ಸಂತ್ರಸ್ತರ ಹೆಸರಿನಲ್ಲಿ ಆಗಿರುವ ಭೂ ಮಂಜೂರಾತಿಗಳು ಸಂಶಯಾಸ್ಪದವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ. ಆದ್ದರಿಂದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಜಮೀನು ಮುಟ್ಟುಗೋಲು ಹಾಕಿಕೊಂಡು ನೈಜ ಸಂತ್ರಸ್ತರಿಗೆ ನೀಡಬೇಕು’ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.