ಇದಕ್ಕೆ ಪ್ರತಿಕ್ರಿಯಿಸಿದ ರಂಭಾಪುರಿ ಶ್ರೀಗಳು, ‘ಚುನಾವಣೆಯಲ್ಲಿ ಯಾರನ್ನೂ ಬೆಂಬಲಿಸುವುದಿಲ್ಲ. ಹಿಂದಿನ ಚುನಾವಣೆಯಲ್ಲಿ ಯಾರು ಏನು ಮಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಸತ್ಯ, ನ್ಯಾಯ, ಪ್ರಾಮಾಣಿಕತೆಗೆ ಗೆಲುವು ಇದ್ದೇ ಇರುತ್ತದೆ. ನನ್ನ ಬಳಿ ಯಾರೇ ಬಂದರೂ ಧಾರ್ಮಿಕ ಗುರುವಾಗಿ ಆಶೀರ್ವಾದ ಮಾಡುತ್ತೇನೆ’ ಎಂದರು.