ಯೋಜನೆಗೆ ಪರಿಸರ ಅನುಮತಿ ದೊರೆತರೂ, ಪರಿಸರ ಪ್ರೇಮಿಗಳು ನ್ಯಾಯಾಲಯದ ಮೊರೆಹೋದಲ್ಲಿ, ಕಾನೂನು ಸಮರಕ್ಕೇ ಅನಗತ್ಯವಾಗಿ ಸಾಕಷ್ಟು ಹಣ ವ್ಯಯಿಸಬೇಕಾಗುತ್ತದೆ. ಯಾವುದೇ ಅಡ್ಡಿ, ಆತಂಕಗಳಿಲ್ಲದ ಯೋಜನೆಗಳನ್ನು ಕೈಗೆತ್ತಿಕೊಳ್ಳುವುದೇ ಸೂಕ್ತ. ರೈಲು ಮಾರ್ಗಗಳಿಗೆ ಸಂಬಂಧಿಸಿದ ರಾಜ್ಯದ ಇತರೆ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಲಾಗುವುದು ಎಂದೂ ಅವರು ಭರವಸೆ ನೀಡಿದ್ದಾರೆ.