ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲಿ ಖಾಸಗಿ ಸೇನೆಯಿಂದ ಹಿಂಸಾಚಾರ: ಸಾಹಿತಿ ಡಾ.ಕೆ. ಮರುಳಸಿದ್ದಪ್ಪ

ಜ.30ರಂದು ಮಹಾ ಸಂಕಲ್ಪ ದಿನ ಆಚರಣೆಗೆ ನಿರ್ಧಾರ
Last Updated 29 ಜನವರಿ 2020, 1:59 IST
ಅಕ್ಷರ ಗಾತ್ರ

ಬೆಂಗಳೂರು: ‘ದೇಶದಲ್ಲಿ ಖಾಸಗಿ ಸೇನೆಯು ಹಿಂಸೆಗೆ ಇಳಿಯುತ್ತಿದೆ. ಇಂತಹ ಸಂಘಟನೆಗಳಿಗೆ ಕೇಂದ್ರ ಸರ್ಕಾರದ ಕುಮ್ಮಕ್ಕೂ ಇದೆ’ ಎಂದು ಹಿರಿಯ ಸಾಹಿತಿ ಡಾ. ಕೆ. ಮರುಳಸಿದ್ದಪ್ಪ ಹೇಳಿದರು.

‘ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ನಿರ್ಮಾಣ ಮಾಡಲಾಗುತ್ತಿದೆ. ಐದು ವರ್ಷಗಳಲ್ಲಿ ಹಿಂಸಾಚಾರದಂತಹ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದಕ್ಕೆಲ್ಲ ಖಾಸಗಿ ಸೇನೆಯೇ ಕಾರಣವಾಗಿದೆ’ ಎಂದು ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸಾಹಿತಿ ಡಾ.ಕೆ.ಶರೀಫಾ, ‘ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುವವರನ್ನು ಕೊಲೆ ಮಾಡಲಾಗುತ್ತಿದೆ. ಬಿಜೆಪಿ ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ಇಂತಹ ದುರಂತಗಳು ನಡೆಯುತ್ತಿವೆ’ ಎಂದರು.

ಕವಯತ್ರಿ ಡಾ. ಸುಕನ್ಯಾ, ‘ಹೊರಗಡೆಯಿಂದ ಮಾಂಸ ಖರೀದಿಸಲೂ ಆತಂಕ ಪಡಬೇಕಾದ ಸ್ಥಿತಿ ದೇಶದಲ್ಲಿದೆ. ಕ್ಷುಲ್ಲಕ ಕಾರಣಕ್ಕಾಗಿ ಯಾರು ನಮ್ಮ ಮೇಲೆ ದಾಳಿ ನಡೆಸುತ್ತಾರೋ ಎನ್ನುವ ಭಯ ಕಾಡುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT