<p><strong>ಮೈಸೂರು: </strong>ಯಾವ ಕಾರಣಕ್ಕೂ ತಾವು ಹುಣಸೂರು ಕ್ಷೇತ್ರವನ್ನು ಬಿಟ್ಟುಕೊಡುವುದಿಲ್ಲ ಎಂದು ಅನರ್ಹ ಶಾಸಕ ಎಚ್. ವಿಶ್ವನಾಥ್ ಶನಿವಾರ ಇಲ್ಲಿ ಹೇಳಿದರು.</p>.<p>‘ಟಿಕೆಟ್ ನೀಡುವ ವಿಷಯದಲ್ಲಿ ಊಹಾಪೋಹದ ಸುದ್ದಿ ಹರಿದಾಡುತ್ತಿದೆ. ಎರಡು ದಿನದ ಹಿಂದಷ್ಟೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿದ್ದೇನೆ. ಹೈಕಮಾಂಡ್ ಬಲಾಢ್ಯವಾಗಿದ್ದು, ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ವಿಧಾನಸಭೆಯ ಈ ಹಿಂದಿನ ಸಭಾಧ್ಯಕ್ಷರು, ಶಾಸಕರನ್ನು ಅನರ್ಹಗೊಳಿಸಿದ ಪ್ರಕರಣದಲ್ಲಿ ಸುಪ್ರೀಂ<br />ಕೋರ್ಟ್ ಐತಿಹಾಸಿಕ ತೀರ್ಪು ನೀಡಲಿದೆ ಎಂದ ವಿಶ್ವನಾಥ್, ‘ಈ ಪ್ರಕರಣವು ಸಂವಿಧಾನ ಪೀಠಕ್ಕೂ ಹೋಗಬಹುದು. ಕಾಯ್ದೆಯ ಬದಲಾವಣೆಗೆ, ಸುಧಾರಣೆಗೆ ಈ ಪ್ರಕರಣದಿಂದಲೇ ದೊಡ್ಡ ಉತ್ತರ ಸಿಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಯಾವ ಕಾರಣಕ್ಕೂ ತಾವು ಹುಣಸೂರು ಕ್ಷೇತ್ರವನ್ನು ಬಿಟ್ಟುಕೊಡುವುದಿಲ್ಲ ಎಂದು ಅನರ್ಹ ಶಾಸಕ ಎಚ್. ವಿಶ್ವನಾಥ್ ಶನಿವಾರ ಇಲ್ಲಿ ಹೇಳಿದರು.</p>.<p>‘ಟಿಕೆಟ್ ನೀಡುವ ವಿಷಯದಲ್ಲಿ ಊಹಾಪೋಹದ ಸುದ್ದಿ ಹರಿದಾಡುತ್ತಿದೆ. ಎರಡು ದಿನದ ಹಿಂದಷ್ಟೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿದ್ದೇನೆ. ಹೈಕಮಾಂಡ್ ಬಲಾಢ್ಯವಾಗಿದ್ದು, ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ವಿಧಾನಸಭೆಯ ಈ ಹಿಂದಿನ ಸಭಾಧ್ಯಕ್ಷರು, ಶಾಸಕರನ್ನು ಅನರ್ಹಗೊಳಿಸಿದ ಪ್ರಕರಣದಲ್ಲಿ ಸುಪ್ರೀಂ<br />ಕೋರ್ಟ್ ಐತಿಹಾಸಿಕ ತೀರ್ಪು ನೀಡಲಿದೆ ಎಂದ ವಿಶ್ವನಾಥ್, ‘ಈ ಪ್ರಕರಣವು ಸಂವಿಧಾನ ಪೀಠಕ್ಕೂ ಹೋಗಬಹುದು. ಕಾಯ್ದೆಯ ಬದಲಾವಣೆಗೆ, ಸುಧಾರಣೆಗೆ ಈ ಪ್ರಕರಣದಿಂದಲೇ ದೊಡ್ಡ ಉತ್ತರ ಸಿಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>