<p><strong>ಮೈಸೂರು:</strong> ಎಚ್.ಡಿ.ಕೋಟೆ ತಾಲ್ಲೂಕಿನ ಕಪಿಲಾ ನದಿಯಲ್ಲಿ ಬೇಸಿಗೆಯಿಂದಾಗಿ ನೀರು ಕಡಿಮೆಯಾಗಿದ್ದು, ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶಗಳಿಗೆ ಕೇರಳದಿಂದ ನೂರಾರು ಸಂಖ್ಯೆಯಲ್ಲಿ ಮದ್ಯಪ್ರಿಯರು ನದಿಯಲ್ಲೇ ನಡೆದುಕೊಂಡೇ ಬರುತ್ತಿದ್ದಾರೆ.</p>.<p>ಸಂಜೆ ವೇಳೆ ನದಿಯಲ್ಲಿನ ಬಂಡೆ ಕಲ್ಲುಗಳ ಮಾರ್ಗವಾಗಿ ನಡೆದುಕೊಂಡು ಬರುವ ಮದ್ಯಪ್ರಿಯರು, ಮದ್ಯ ಖರೀದಿಸಿ ಅದೇ ಮಾರ್ಗದಲ್ಲಿ ಕೇರಳಕ್ಕೆ ವಾಪಸ್ಸಾಗುತ್ತಿದ್ದಾರೆ.</p>.<p>‘ಕೊರೊನಾ ವೈರಾಣು ಹರಡುವ ಭೀತಿಯಲ್ಲಿ ಈಗಾಗಲೇ ಡಿ.ಬಿ.ಕುಪ್ಪೆಯಲ್ಲಿದ್ದ ಮದ್ಯದಂಗಡಿ ಮುಚ್ಚಲಾಗಿದೆ. ಕೇರಳದವರು ಸಮೀಪದಲ್ಲೇ ಇರುವ ಕಾರಾಪುರದ ಮದ್ಯದಂಗಡಿಗೆ ಬರುತ್ತಿದ್ದಾರೆ’ ಎಂದು ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ಅಧ್ಯಕ್ಷ ತಿರುಪತಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಈ ಕುರಿತು ಪ್ರತಿಕ್ರಿಯಿಸಿದ ಉಪವಿಭಾಗಾಧಿಕಾರಿ ವೀಣಾ, ‘ನುಸುಳುಕೋರರನ್ನು ತಡೆಯಲು ಪೊಲೀಸ್ ಗಸ್ತು ವ್ಯವಸ್ಥೆ ಹೆಚ್ಚಿಸಲಾಗಿದೆ. ಸ್ಥಳೀಯ ಮದ್ಯದಂಗಡಿಗಳನ್ನು ಮುಚ್ಚಿಸಲಾಗಿದೆ’ ಎಂದರು.</p>.<p>ಇವರಿಂದ ಕೊರೊನಾ ಸೋಂಕು ಹರಡುವ ಭೀತಿ ಇದ್ದರೆ, ಮತ್ತೊಂದೆಡೆ ಕೇರಳಕ್ಕೆ ಮುಂಗಾರು ಮಾರುತಗಳು ಪ್ರವೇಶಿಸಿರುವುದರಿಂದ ಮಳೆ ಬಂದು ನದಿಯ ಮಟ್ಟ ಹೆಚ್ಚಾಗುವ ಸಾಧ್ಯತೆ ಇದೆ. ಇದು ಅಪಾಯಕ್ಕೆ ಆಸ್ಪದ ನೀಡಲಿದೆ.</p>.<p>ಮದ್ಯದಂಗಡಿಗಳು ಮುಚ್ಚಿದ್ದರೂ, ಕೆಲವರು ಮೊಬೈಲ್ ಮೂಲಕ ಸಂಪರ್ಕಿಸುತ್ತಿದ್ದಾರೆ. ನದಿ ತೀರಕ್ಕೆ ಮದ್ಯದ ಬಾಟಲಿಗಳನ್ನು ತಂದು ಮೂರುಪಟ್ಟು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಎಚ್.ಡಿ.ಕೋಟೆ ತಾಲ್ಲೂಕಿನ ಕಪಿಲಾ ನದಿಯಲ್ಲಿ ಬೇಸಿಗೆಯಿಂದಾಗಿ ನೀರು ಕಡಿಮೆಯಾಗಿದ್ದು, ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶಗಳಿಗೆ ಕೇರಳದಿಂದ ನೂರಾರು ಸಂಖ್ಯೆಯಲ್ಲಿ ಮದ್ಯಪ್ರಿಯರು ನದಿಯಲ್ಲೇ ನಡೆದುಕೊಂಡೇ ಬರುತ್ತಿದ್ದಾರೆ.</p>.<p>ಸಂಜೆ ವೇಳೆ ನದಿಯಲ್ಲಿನ ಬಂಡೆ ಕಲ್ಲುಗಳ ಮಾರ್ಗವಾಗಿ ನಡೆದುಕೊಂಡು ಬರುವ ಮದ್ಯಪ್ರಿಯರು, ಮದ್ಯ ಖರೀದಿಸಿ ಅದೇ ಮಾರ್ಗದಲ್ಲಿ ಕೇರಳಕ್ಕೆ ವಾಪಸ್ಸಾಗುತ್ತಿದ್ದಾರೆ.</p>.<p>‘ಕೊರೊನಾ ವೈರಾಣು ಹರಡುವ ಭೀತಿಯಲ್ಲಿ ಈಗಾಗಲೇ ಡಿ.ಬಿ.ಕುಪ್ಪೆಯಲ್ಲಿದ್ದ ಮದ್ಯದಂಗಡಿ ಮುಚ್ಚಲಾಗಿದೆ. ಕೇರಳದವರು ಸಮೀಪದಲ್ಲೇ ಇರುವ ಕಾರಾಪುರದ ಮದ್ಯದಂಗಡಿಗೆ ಬರುತ್ತಿದ್ದಾರೆ’ ಎಂದು ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ಅಧ್ಯಕ್ಷ ತಿರುಪತಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಈ ಕುರಿತು ಪ್ರತಿಕ್ರಿಯಿಸಿದ ಉಪವಿಭಾಗಾಧಿಕಾರಿ ವೀಣಾ, ‘ನುಸುಳುಕೋರರನ್ನು ತಡೆಯಲು ಪೊಲೀಸ್ ಗಸ್ತು ವ್ಯವಸ್ಥೆ ಹೆಚ್ಚಿಸಲಾಗಿದೆ. ಸ್ಥಳೀಯ ಮದ್ಯದಂಗಡಿಗಳನ್ನು ಮುಚ್ಚಿಸಲಾಗಿದೆ’ ಎಂದರು.</p>.<p>ಇವರಿಂದ ಕೊರೊನಾ ಸೋಂಕು ಹರಡುವ ಭೀತಿ ಇದ್ದರೆ, ಮತ್ತೊಂದೆಡೆ ಕೇರಳಕ್ಕೆ ಮುಂಗಾರು ಮಾರುತಗಳು ಪ್ರವೇಶಿಸಿರುವುದರಿಂದ ಮಳೆ ಬಂದು ನದಿಯ ಮಟ್ಟ ಹೆಚ್ಚಾಗುವ ಸಾಧ್ಯತೆ ಇದೆ. ಇದು ಅಪಾಯಕ್ಕೆ ಆಸ್ಪದ ನೀಡಲಿದೆ.</p>.<p>ಮದ್ಯದಂಗಡಿಗಳು ಮುಚ್ಚಿದ್ದರೂ, ಕೆಲವರು ಮೊಬೈಲ್ ಮೂಲಕ ಸಂಪರ್ಕಿಸುತ್ತಿದ್ದಾರೆ. ನದಿ ತೀರಕ್ಕೆ ಮದ್ಯದ ಬಾಟಲಿಗಳನ್ನು ತಂದು ಮೂರುಪಟ್ಟು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>