<p><strong>ಬೆಳಗಾವಿ: </strong>ಕಬ್ಬಿನ ಬಾಕಿ ಬಿಲ್ ಕೊಡಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಕಳೆದ ನಾಲ್ಕು ದಿನಗಳಿಂದ ಧರಣಿ ನಡೆಸಿದ್ದ ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಅಧ್ಯಕ್ಷ ಸಿದಗೌಡ ಮೋದಗಿ ಅವರು ಮಂಗಳವಾರದಿಂದ ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ– ಹಸಿರು ಸೇನೆ, ಕಬ್ಬು ಬೆಳೆಗಾರರ ಸಂಘ, ಕೃಷಿಕ ಸಮಾಜ ಸೇರಿದಂತೆ ವಿವಿಧ ಸಂಘಟನೆಗಳ ಆಶ್ರಯದಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಅವರು ಪಾಲ್ಗೊಂಡಿದ್ದಾರೆ.</p>.<p>‘ಇಷ್ಟು ದಿನಗಳವರೆಗೆ ಶಾಂತ ರೀತಿಯಿಂದ ಧರಣಿ ನಡೆಸಿದೇವು. ಆದರೆ, ಸರ್ಕಾರ ಇತ್ತ ನೋಡಲಿಲ್ಲ. ಅದಕ್ಕಾಗಿ ಆಮರಣ ಉಪವಾಸ ಆರಂಭಿಸಿದ್ದೇನೆ. ಸದ್ಯದಲ್ಲಿಯೇ ಪಾದಯಾತ್ರೆಯ ಮೂಲಕ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಯೋಜನೆ ಹಾಕಿಕೊಂಡಿದ್ದೇನೆ’ ಎಂದು ಸಿದಗೌಡ ಮೋದಗಿ ಹೇಳಿದರು.</p>.<p><strong>ಕುರಬೂರು ಶಾಂತಕುಮಾರ್ ವಾಪಸ್: </strong>ಸಿದಗೌಡ ಮೋದಗಿ ಅವರಿಗೆ ಕಳೆದ ಎರಡು ದಿನಗಳಿಂದ ಬೆಂಬಲ ನೀಡಿ, ಧರಣಿಯಲ್ಲಿ ಪಾಲ್ಗೊಂಡಿದ್ದ ರಾಜ್ಯ ಕಬ್ಬುಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್, ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳವಾರ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.</p>.<p>ಇದಕ್ಕಿಂತ ಮುಂಚೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ವೈದ್ಯರು ಹಾಗೂ ರೈತ ಮುಖಂಡರ ಸಲಹೆ ಮೇರೆಗೆ ವಾಪಸ್ ಹೋಗುತ್ತಿದ್ದೇನೆ. ನಾನು ಹೋದರೂ, ಇಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಮುಂದುವರಿಯುತ್ತದೆ. ಬೇಡಿಕೆ ಈಡೇರುವವರೆಗೆ ನಡೆಯಲಿದೆ’ ಎಂದು ಹೇಳಿದರು.</p>.<p><strong>ವಕೀಲರ ಬೆಂಬಲ:</strong>ರೈತರ ಹೋರಾಟಕ್ಕೆ ಬೆಂಬಲ ನೀಡಲು ಬೆಳಗಾವಿ ವಕೀಲರ ಸಂಘ ನಿರ್ಧರಿಸಿದ್ದು, ಬುಧವಾರ ನ್ಯಾಯಾಲಯದ ಕಲಾಪಗಳಿಂದ ಹೊರಗುಳಿಯಲು ತೀರ್ಮಾನಿಸಿದೆ.</p>.<p>‘ರೈತರ ಬೇಡಿಕೆಗಳು ನ್ಯಾಯಯುತವಾಗಿದ್ದು, ಸ್ಪಂದನೆ ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಲು ಈ ತೀರ್ಮಾನ ಕೈಗೊಂಡಿದ್ದೇವೆ. ಕಲಾಪದಿಂದ ಹೊರಗುಳಿಯುವಂತೆ ಜಿಲ್ಲೆಯ ಎಲ್ಲ ತಾಲ್ಲೂಕು ಘಟಕಗಳ ಪದಾಧಿಕಾರಿಗಳಿಗೆ, ಸದಸ್ಯರಿಗೆ ಸೂಚಿಸಲಾಗಿದೆ’ ಎಂದು ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್. ಕಿವಡಸಣ್ಣವರ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಕಬ್ಬಿನ ಬಾಕಿ ಬಿಲ್ ಕೊಡಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಕಳೆದ ನಾಲ್ಕು ದಿನಗಳಿಂದ ಧರಣಿ ನಡೆಸಿದ್ದ ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಅಧ್ಯಕ್ಷ ಸಿದಗೌಡ ಮೋದಗಿ ಅವರು ಮಂಗಳವಾರದಿಂದ ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ– ಹಸಿರು ಸೇನೆ, ಕಬ್ಬು ಬೆಳೆಗಾರರ ಸಂಘ, ಕೃಷಿಕ ಸಮಾಜ ಸೇರಿದಂತೆ ವಿವಿಧ ಸಂಘಟನೆಗಳ ಆಶ್ರಯದಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಅವರು ಪಾಲ್ಗೊಂಡಿದ್ದಾರೆ.</p>.<p>‘ಇಷ್ಟು ದಿನಗಳವರೆಗೆ ಶಾಂತ ರೀತಿಯಿಂದ ಧರಣಿ ನಡೆಸಿದೇವು. ಆದರೆ, ಸರ್ಕಾರ ಇತ್ತ ನೋಡಲಿಲ್ಲ. ಅದಕ್ಕಾಗಿ ಆಮರಣ ಉಪವಾಸ ಆರಂಭಿಸಿದ್ದೇನೆ. ಸದ್ಯದಲ್ಲಿಯೇ ಪಾದಯಾತ್ರೆಯ ಮೂಲಕ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಯೋಜನೆ ಹಾಕಿಕೊಂಡಿದ್ದೇನೆ’ ಎಂದು ಸಿದಗೌಡ ಮೋದಗಿ ಹೇಳಿದರು.</p>.<p><strong>ಕುರಬೂರು ಶಾಂತಕುಮಾರ್ ವಾಪಸ್: </strong>ಸಿದಗೌಡ ಮೋದಗಿ ಅವರಿಗೆ ಕಳೆದ ಎರಡು ದಿನಗಳಿಂದ ಬೆಂಬಲ ನೀಡಿ, ಧರಣಿಯಲ್ಲಿ ಪಾಲ್ಗೊಂಡಿದ್ದ ರಾಜ್ಯ ಕಬ್ಬುಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್, ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳವಾರ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.</p>.<p>ಇದಕ್ಕಿಂತ ಮುಂಚೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ವೈದ್ಯರು ಹಾಗೂ ರೈತ ಮುಖಂಡರ ಸಲಹೆ ಮೇರೆಗೆ ವಾಪಸ್ ಹೋಗುತ್ತಿದ್ದೇನೆ. ನಾನು ಹೋದರೂ, ಇಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಮುಂದುವರಿಯುತ್ತದೆ. ಬೇಡಿಕೆ ಈಡೇರುವವರೆಗೆ ನಡೆಯಲಿದೆ’ ಎಂದು ಹೇಳಿದರು.</p>.<p><strong>ವಕೀಲರ ಬೆಂಬಲ:</strong>ರೈತರ ಹೋರಾಟಕ್ಕೆ ಬೆಂಬಲ ನೀಡಲು ಬೆಳಗಾವಿ ವಕೀಲರ ಸಂಘ ನಿರ್ಧರಿಸಿದ್ದು, ಬುಧವಾರ ನ್ಯಾಯಾಲಯದ ಕಲಾಪಗಳಿಂದ ಹೊರಗುಳಿಯಲು ತೀರ್ಮಾನಿಸಿದೆ.</p>.<p>‘ರೈತರ ಬೇಡಿಕೆಗಳು ನ್ಯಾಯಯುತವಾಗಿದ್ದು, ಸ್ಪಂದನೆ ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಲು ಈ ತೀರ್ಮಾನ ಕೈಗೊಂಡಿದ್ದೇವೆ. ಕಲಾಪದಿಂದ ಹೊರಗುಳಿಯುವಂತೆ ಜಿಲ್ಲೆಯ ಎಲ್ಲ ತಾಲ್ಲೂಕು ಘಟಕಗಳ ಪದಾಧಿಕಾರಿಗಳಿಗೆ, ಸದಸ್ಯರಿಗೆ ಸೂಚಿಸಲಾಗಿದೆ’ ಎಂದು ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್. ಕಿವಡಸಣ್ಣವರ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>