<p>ಬೆಂಗಳೂರು: ಬೇರೊಬ್ಬಳ ಜೊತೆಗಿನ ಸಂಬಂಧ ಪ್ರಶ್ನಿಸಿದಳೆಂಬ ಕಾರಣಕ್ಕೆ ತನ್ನ ಪತ್ನಿ ಸಂಧ್ಯಾ ಎಂಬುವರನ್ನು ಕೊಂದ ಆರೋಪಿ ಮನೀಶ್ಕುಮಾರ್ ಬಳಿಕ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಪರಪ್ಪನ ಅಗ್ರಹಾರ ಠಾಣೆ ವ್ಯಾಪ್ತಿಯ ಕೂಡ್ಲುಗೇಟ್ ಬಳಿ ಈ ಘಟನೆ ನಡೆದಿದೆ. ಸ್ಥಳದಲ್ಲಿ ಮರಣ ಪತ್ರ ಸಿಕ್ಕಿದ್ದು, ಅದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.</p>.<p>‘ಬಿಹಾರದ ಮನೀಶ್ ಕುಮಾರ್ ಮತ್ತು ಸಂಧ್ಯಾ 2016ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಉದ್ಯೋಗ ಹುಡುಕಿಕೊಂಡು ಪತ್ನಿ ಜೊತೆಗೆ ಮನೀಶ್ ನಗರಕ್ಕೆ ಬಂದಿದ್ದರು. ಗಾರ್ಮೆಂಟ್ಸ್ ಕಾರ್ಖಾನೆಯೊಂದರಲ್ಲಿ ಅವರಿಗೆ ವ್ಯವಸ್ಥಾಪಕ ಕೆಲಸ ಸಿಕ್ಕಿತ್ತು. ಅಪಾರ್ಟ್ಮೆಂಟ್ ಸಮುಚ್ಚಯವೊಂದರಲ್ಲಿ ದಂಪತಿ ನೆಲೆಸಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಮನೀಶ್ ಮಾತ್ರ ಕೆಲಸಕ್ಕೆ ಹೋಗುತ್ತಿದ್ದರು. ಪತ್ನಿ ಮನೆಯಲ್ಲೇ ಇರುತ್ತಿದ್ದರು. ಮದುವೆಗೂ ಮುನ್ನ ದೆಹಲಿ ಯುವತಿಯೊಬ್ಬರ ಜೊತೆ ಮನೀಶ್ ಸಲುಗೆ ಬೆಳೆಸಿಕೊಂಡಿದ್ದರು. ಮದುವೆ ಬಳಿಕವೂ ಅದೇ ಯುವತಿ ಜೊತೆ ಮಾತನಾಡುತ್ತಿದ್ದರು. ಆಗಾಗ ಭೇಟಿ ಸಹ ಆಗುತ್ತಿದ್ದರು’</p>.<p>‘ಯುವತಿ ಜೊತೆಗಿನ ಸಂಬಂಧವನ್ನು ಸಂಧ್ಯಾ ಪ್ರಶ್ನಿಸಿದ್ದರು.<br />ಅದೇ ವಿಚಾರವಾಗಿ ದಂಪತಿ ನಡುವೆ ಹಲವು ದಿನಗಳಿಂದ ಗಲಾಟೆ ಶುರುವಾಗಿತ್ತು. ಗಲಾಟೆಯೇ ವಿಕೋಪಕ್ಕೆ ಹೋಗಿದ್ದರಿಂದ ಮನೀಶ್, ಪತ್ನಿ ಸಂಧ್ಯಾ ಅವರನ್ನು ಕೊಲೆ ಮಾಡಿದ್ದಾರೆ. ಶನಿವಾರ ತಾವೂ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p class="Subhead">ಬೆಡ್ಶೀಟ್ನಲ್ಲಿದ್ದ ಮೃತದೇಹ: ‘ಅಪಾರ್ಟ್ಮೆಂಟ್ ಸಮುಚ್ಚಯದ ಆವರಣದಲ್ಲಿ ಮನೀಶ್ ಮೃತದೇಹವಿತ್ತು. ಅವರ ಮನೆಯಲ್ಲಿ ಪರಿಶೀಲಿಸಿದಾಗ ಸಂಧ್ಯಾ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಸಿಕ್ಕಿತು’ ಎಂದರು.</p>.<p>‘ಮಲಗುವ ಕೊಠಡಿ ಬೆಡ್ಶೀಟ್ನಲ್ಲಿ ಕೊಳೆತ ಸ್ಥಿತಿಯಲ್ಲಿ ಸಂಧ್ಯಾ ಮೃತದೇಹವಿತ್ತು. ಎರಡ್ಮೂರು ದಿನಗಳ ಹಿಂದೆ ಕೃತ್ಯ ನಡೆದಿರುವ ಅನುಮಾನವಿದೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಬೇರೊಬ್ಬಳ ಜೊತೆಗಿನ ಸಂಬಂಧ ಪ್ರಶ್ನಿಸಿದಳೆಂಬ ಕಾರಣಕ್ಕೆ ತನ್ನ ಪತ್ನಿ ಸಂಧ್ಯಾ ಎಂಬುವರನ್ನು ಕೊಂದ ಆರೋಪಿ ಮನೀಶ್ಕುಮಾರ್ ಬಳಿಕ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಪರಪ್ಪನ ಅಗ್ರಹಾರ ಠಾಣೆ ವ್ಯಾಪ್ತಿಯ ಕೂಡ್ಲುಗೇಟ್ ಬಳಿ ಈ ಘಟನೆ ನಡೆದಿದೆ. ಸ್ಥಳದಲ್ಲಿ ಮರಣ ಪತ್ರ ಸಿಕ್ಕಿದ್ದು, ಅದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.</p>.<p>‘ಬಿಹಾರದ ಮನೀಶ್ ಕುಮಾರ್ ಮತ್ತು ಸಂಧ್ಯಾ 2016ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಉದ್ಯೋಗ ಹುಡುಕಿಕೊಂಡು ಪತ್ನಿ ಜೊತೆಗೆ ಮನೀಶ್ ನಗರಕ್ಕೆ ಬಂದಿದ್ದರು. ಗಾರ್ಮೆಂಟ್ಸ್ ಕಾರ್ಖಾನೆಯೊಂದರಲ್ಲಿ ಅವರಿಗೆ ವ್ಯವಸ್ಥಾಪಕ ಕೆಲಸ ಸಿಕ್ಕಿತ್ತು. ಅಪಾರ್ಟ್ಮೆಂಟ್ ಸಮುಚ್ಚಯವೊಂದರಲ್ಲಿ ದಂಪತಿ ನೆಲೆಸಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಮನೀಶ್ ಮಾತ್ರ ಕೆಲಸಕ್ಕೆ ಹೋಗುತ್ತಿದ್ದರು. ಪತ್ನಿ ಮನೆಯಲ್ಲೇ ಇರುತ್ತಿದ್ದರು. ಮದುವೆಗೂ ಮುನ್ನ ದೆಹಲಿ ಯುವತಿಯೊಬ್ಬರ ಜೊತೆ ಮನೀಶ್ ಸಲುಗೆ ಬೆಳೆಸಿಕೊಂಡಿದ್ದರು. ಮದುವೆ ಬಳಿಕವೂ ಅದೇ ಯುವತಿ ಜೊತೆ ಮಾತನಾಡುತ್ತಿದ್ದರು. ಆಗಾಗ ಭೇಟಿ ಸಹ ಆಗುತ್ತಿದ್ದರು’</p>.<p>‘ಯುವತಿ ಜೊತೆಗಿನ ಸಂಬಂಧವನ್ನು ಸಂಧ್ಯಾ ಪ್ರಶ್ನಿಸಿದ್ದರು.<br />ಅದೇ ವಿಚಾರವಾಗಿ ದಂಪತಿ ನಡುವೆ ಹಲವು ದಿನಗಳಿಂದ ಗಲಾಟೆ ಶುರುವಾಗಿತ್ತು. ಗಲಾಟೆಯೇ ವಿಕೋಪಕ್ಕೆ ಹೋಗಿದ್ದರಿಂದ ಮನೀಶ್, ಪತ್ನಿ ಸಂಧ್ಯಾ ಅವರನ್ನು ಕೊಲೆ ಮಾಡಿದ್ದಾರೆ. ಶನಿವಾರ ತಾವೂ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p class="Subhead">ಬೆಡ್ಶೀಟ್ನಲ್ಲಿದ್ದ ಮೃತದೇಹ: ‘ಅಪಾರ್ಟ್ಮೆಂಟ್ ಸಮುಚ್ಚಯದ ಆವರಣದಲ್ಲಿ ಮನೀಶ್ ಮೃತದೇಹವಿತ್ತು. ಅವರ ಮನೆಯಲ್ಲಿ ಪರಿಶೀಲಿಸಿದಾಗ ಸಂಧ್ಯಾ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಸಿಕ್ಕಿತು’ ಎಂದರು.</p>.<p>‘ಮಲಗುವ ಕೊಠಡಿ ಬೆಡ್ಶೀಟ್ನಲ್ಲಿ ಕೊಳೆತ ಸ್ಥಿತಿಯಲ್ಲಿ ಸಂಧ್ಯಾ ಮೃತದೇಹವಿತ್ತು. ಎರಡ್ಮೂರು ದಿನಗಳ ಹಿಂದೆ ಕೃತ್ಯ ನಡೆದಿರುವ ಅನುಮಾನವಿದೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>