<p><strong>ಬೆಂಗಳೂರು:</strong> ಬಿಜೆಪಿ ಅತೃಪ್ತರ ಸಭೆ ಮತ್ತು ನಾಯಕತ್ವವನ್ನು ಪ್ರಶ್ನಿಸಿದ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.</p>.<p>ನರೇಂದ್ರಮೋದಿ ಪ್ರಧಾನಿಯಾಗಿ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ನಡೆಸಿದ ಸುದ್ದಿ ಗೋಷ್ಠಿಯಲ್ಲಿ ರಾಜಕೀಯದ ಬಗ್ಗೆ ಮಾತನಾಡಲು ನಿರಾಕರಿಸಿದರು. ‘ನಾನೀನ ಕೊರೊನಾ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಅದನ್ನು ಬಿಟ್ಟು ಬೇರೆ ಏನನ್ನೂ ಮಾತನಾಡುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾಗಿರುವ ಹಣವನ್ನು ಬಿಡುಗಡೆ ಮಾಡದೇ ರಾಜ್ಯವನ್ನು ನಿರ್ಲಕ್ಷಿಸಲಾಗಿದೆಯಲ್ಲವೆ ಎಂಬ ಪ್ರಶ್ನೆಗೆ, ಹಲವು ಸಂದರ್ಭಗಳಲ್ಲಿ ರಾಜ್ಯಕ್ಕೆ ಅನುದಾನ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಜಾಸ್ತಿ ಹಣ ಬಿಡುಗಡೆ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಯಡಿಯೂರಪ್ಪ ತಿಳಿಸಿದರು.</p>.<p>‘ರಾಜ್ಯದಲ್ಲಿ ಕೊರೊನಾ ಪೀಡಿತರಿಗೆ ಯಾವುದೇ ಆಸ್ಪತ್ರೆಗಳು ಚಿಕಿತ್ಸೆ ನಿರಾಕರಿಸುವಂತಿಲ್ಲ. ಎಂತಹುದೇ ತುರ್ತು ಸಂದರ್ಭ ಬಂದರೂ ಚಿಕಿತ್ಸೆ ನೀಡಲೇಬೇಕು. ಈ ವಿಷಯದ ಬಗ್ಗೆ ದೂರುಗಳು ಬಂದಿವೆ. ಆ ಕುರಿತು ಗಮನಹರಿಸುತ್ತೇನೆ’ ಎಂದೂ ಅವರು ಹೇಳಿದರು.</p>.<p>ಮಹಾರಾಷ್ಟ್ರದಿಂದ ಬಂದವರಿಗೆ ಆಸ್ಪತ್ರೆಗಳಲ್ಲಿ ಕ್ವಾರಂಟೈನ್ ಮಾಡುತ್ತಿದ್ದೇವೆ. ಉಳಿದ ರಾಜ್ಯಗಳಿಂದ ಬಂದವರಿಗೆ ಹೋಂ ಕ್ವಾರಂಟೈನ್ಗೆ ಸೂಚಿಸಿರುವುದಾಗಿಯೂ ಅವರು ತಿಳಿಸಿದರು.ಕೊರೊನಾ ನಿರ್ವ</p>.<p>ಹಣೆಗೆ ಸಂಬಂಧಿಸಿದಂತೆ ವೈದ್ಯಕೀಯ ಉಪಕರಣಗಳ ಕೊರತೆ ಇಲ್ಲ. ರಾಜ್ಯದಲ್ಲಿ ಪರಿಸ್ಥಿತಿ ನಿಭಾಯಿಸಲು ಅಗತ್ಯವಿರುವಷ್ಟು ಪಿಪಿಇ ಕಿಟ್ಗಳು ಸೇರಿದಂತೆ ಎಲ್ಲ ಬಗೆಯ ಉಪಕರಣಗಳೂ ಇವೆ ಎಂದು ಯಡಿಯೂರಪ್ಪ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಜೆಪಿ ಅತೃಪ್ತರ ಸಭೆ ಮತ್ತು ನಾಯಕತ್ವವನ್ನು ಪ್ರಶ್ನಿಸಿದ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.</p>.<p>ನರೇಂದ್ರಮೋದಿ ಪ್ರಧಾನಿಯಾಗಿ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ನಡೆಸಿದ ಸುದ್ದಿ ಗೋಷ್ಠಿಯಲ್ಲಿ ರಾಜಕೀಯದ ಬಗ್ಗೆ ಮಾತನಾಡಲು ನಿರಾಕರಿಸಿದರು. ‘ನಾನೀನ ಕೊರೊನಾ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಅದನ್ನು ಬಿಟ್ಟು ಬೇರೆ ಏನನ್ನೂ ಮಾತನಾಡುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾಗಿರುವ ಹಣವನ್ನು ಬಿಡುಗಡೆ ಮಾಡದೇ ರಾಜ್ಯವನ್ನು ನಿರ್ಲಕ್ಷಿಸಲಾಗಿದೆಯಲ್ಲವೆ ಎಂಬ ಪ್ರಶ್ನೆಗೆ, ಹಲವು ಸಂದರ್ಭಗಳಲ್ಲಿ ರಾಜ್ಯಕ್ಕೆ ಅನುದಾನ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಜಾಸ್ತಿ ಹಣ ಬಿಡುಗಡೆ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಯಡಿಯೂರಪ್ಪ ತಿಳಿಸಿದರು.</p>.<p>‘ರಾಜ್ಯದಲ್ಲಿ ಕೊರೊನಾ ಪೀಡಿತರಿಗೆ ಯಾವುದೇ ಆಸ್ಪತ್ರೆಗಳು ಚಿಕಿತ್ಸೆ ನಿರಾಕರಿಸುವಂತಿಲ್ಲ. ಎಂತಹುದೇ ತುರ್ತು ಸಂದರ್ಭ ಬಂದರೂ ಚಿಕಿತ್ಸೆ ನೀಡಲೇಬೇಕು. ಈ ವಿಷಯದ ಬಗ್ಗೆ ದೂರುಗಳು ಬಂದಿವೆ. ಆ ಕುರಿತು ಗಮನಹರಿಸುತ್ತೇನೆ’ ಎಂದೂ ಅವರು ಹೇಳಿದರು.</p>.<p>ಮಹಾರಾಷ್ಟ್ರದಿಂದ ಬಂದವರಿಗೆ ಆಸ್ಪತ್ರೆಗಳಲ್ಲಿ ಕ್ವಾರಂಟೈನ್ ಮಾಡುತ್ತಿದ್ದೇವೆ. ಉಳಿದ ರಾಜ್ಯಗಳಿಂದ ಬಂದವರಿಗೆ ಹೋಂ ಕ್ವಾರಂಟೈನ್ಗೆ ಸೂಚಿಸಿರುವುದಾಗಿಯೂ ಅವರು ತಿಳಿಸಿದರು.ಕೊರೊನಾ ನಿರ್ವ</p>.<p>ಹಣೆಗೆ ಸಂಬಂಧಿಸಿದಂತೆ ವೈದ್ಯಕೀಯ ಉಪಕರಣಗಳ ಕೊರತೆ ಇಲ್ಲ. ರಾಜ್ಯದಲ್ಲಿ ಪರಿಸ್ಥಿತಿ ನಿಭಾಯಿಸಲು ಅಗತ್ಯವಿರುವಷ್ಟು ಪಿಪಿಇ ಕಿಟ್ಗಳು ಸೇರಿದಂತೆ ಎಲ್ಲ ಬಗೆಯ ಉಪಕರಣಗಳೂ ಇವೆ ಎಂದು ಯಡಿಯೂರಪ್ಪ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>