<p><strong>ಮೈಸೂರು:</strong> ‘ಕಷ್ಟಕಾಲದಲ್ಲಿ ನಾನು ನಿಮ್ಮ ಜತೆ ನಿಲ್ಲುತ್ತೇನೆ. ನನ್ನ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಕೊಡಿ ಎಂದಷ್ಟೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ಕೇಳಿದ್ದೇನೆ’ ಎಂದು ಕೊಳ್ಳೆಗಾಲದ ಶಾಸಕ ಎನ್.ಮಹೇಶ್ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಹಿಂದಿನ ವರ್ಷಗಳಲ್ಲಿ ನನ್ನ ಕ್ಷೇತ್ರಕ್ಕೆ ಅನ್ಯಾಯ ಆಗಿದೆ. ಈಗಲಾದರೂ ಹೆಚ್ಚಿನ ಅನುದಾನ ನೀಡಿದರೆ ಅದನ್ನು ಬಳಸಿಕೊಂಡು ಜನರಿಗೆ ನೀಡಿರುವ ಭರವಸೆ ಈಡೇರಿಸುತ್ತೇನೆ’ ಎಂದು ಅವರು ಇಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅನರ್ಹ ಶಾಸಕರು ಹೇಗೆ ಗೆದ್ದು ಬಂದಿದ್ದಾರೆ ಎನ್ನುವುದು ಗೊತ್ತಿದೆ ಎಂದು ನೀಡಿದ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಹೇಗೆ ಗೆದ್ದು ಬರುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಈಗ ಆ ವಿಚಾರದ ಚರ್ಚೆ ಬೇಡ. ಆದರೆ, ಸಿದ್ದರಾಮಯ್ಯ ಹೇಳಿಕೆ ಸರಿಯಲ್ಲ’ ಎಂದು ಖಂಡಿಸಿದರು.</p>.<p>ಸಿದ್ದರಾಮಯ್ಯ ಅವರು ಹಿರಿಯರಿದ್ದಾರೆ. ಜನತಾ ನ್ಯಾಯಾಲಯವೇ ಅಂತಿಮ ಎನ್ನುವ ಅಂಶ ಅವರಿಗೂ ತಿಳಿದಿದೆ. ಜನತಾ ನ್ಯಾಯಾಲಯದಲ್ಲೇ ಆಯ್ಕೆಯಾದ ಮೇಲೆ ಮತ್ತೆ ಮತ್ತೆ ಅನರ್ಹರು ಎಂದು ಕರೆಯುವುದು ಸಮಂಜಸ ಅಲ್ಲ ಎಂದು ಅಭಿಪ್ರಾಯಪಟ್ಟರು.</p>.<p>ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದಕ್ಕೆ ಕಾರಣರಾದವರ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈಗಾಗಲೇ ಶೇ 75ರಷ್ಟು ವಾಗ್ದಾನ ಈಡೇರಿಸಿದ್ದಾರೆ. ಉಳಿದ ವಾಗ್ದಾನವನ್ನೂ ಅವರು ಈಡೇರಿಸಲಿದ್ದಾರೆ ಎಂದು ಹೇಳಿದರು.</p>.<p>‘ನಾನೀಗ ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಬಿಎಸ್ಪಿ ಹೀಗೆ ಯಾವುದೇ ಪಕ್ಷದಲ್ಲಿ ಇಲ್ಲ ಸ್ವತಂತ್ರವಾಗಿದ್ದೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಕಷ್ಟಕಾಲದಲ್ಲಿ ನಾನು ನಿಮ್ಮ ಜತೆ ನಿಲ್ಲುತ್ತೇನೆ. ನನ್ನ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಕೊಡಿ ಎಂದಷ್ಟೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ಕೇಳಿದ್ದೇನೆ’ ಎಂದು ಕೊಳ್ಳೆಗಾಲದ ಶಾಸಕ ಎನ್.ಮಹೇಶ್ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಹಿಂದಿನ ವರ್ಷಗಳಲ್ಲಿ ನನ್ನ ಕ್ಷೇತ್ರಕ್ಕೆ ಅನ್ಯಾಯ ಆಗಿದೆ. ಈಗಲಾದರೂ ಹೆಚ್ಚಿನ ಅನುದಾನ ನೀಡಿದರೆ ಅದನ್ನು ಬಳಸಿಕೊಂಡು ಜನರಿಗೆ ನೀಡಿರುವ ಭರವಸೆ ಈಡೇರಿಸುತ್ತೇನೆ’ ಎಂದು ಅವರು ಇಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅನರ್ಹ ಶಾಸಕರು ಹೇಗೆ ಗೆದ್ದು ಬಂದಿದ್ದಾರೆ ಎನ್ನುವುದು ಗೊತ್ತಿದೆ ಎಂದು ನೀಡಿದ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಹೇಗೆ ಗೆದ್ದು ಬರುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಈಗ ಆ ವಿಚಾರದ ಚರ್ಚೆ ಬೇಡ. ಆದರೆ, ಸಿದ್ದರಾಮಯ್ಯ ಹೇಳಿಕೆ ಸರಿಯಲ್ಲ’ ಎಂದು ಖಂಡಿಸಿದರು.</p>.<p>ಸಿದ್ದರಾಮಯ್ಯ ಅವರು ಹಿರಿಯರಿದ್ದಾರೆ. ಜನತಾ ನ್ಯಾಯಾಲಯವೇ ಅಂತಿಮ ಎನ್ನುವ ಅಂಶ ಅವರಿಗೂ ತಿಳಿದಿದೆ. ಜನತಾ ನ್ಯಾಯಾಲಯದಲ್ಲೇ ಆಯ್ಕೆಯಾದ ಮೇಲೆ ಮತ್ತೆ ಮತ್ತೆ ಅನರ್ಹರು ಎಂದು ಕರೆಯುವುದು ಸಮಂಜಸ ಅಲ್ಲ ಎಂದು ಅಭಿಪ್ರಾಯಪಟ್ಟರು.</p>.<p>ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದಕ್ಕೆ ಕಾರಣರಾದವರ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈಗಾಗಲೇ ಶೇ 75ರಷ್ಟು ವಾಗ್ದಾನ ಈಡೇರಿಸಿದ್ದಾರೆ. ಉಳಿದ ವಾಗ್ದಾನವನ್ನೂ ಅವರು ಈಡೇರಿಸಲಿದ್ದಾರೆ ಎಂದು ಹೇಳಿದರು.</p>.<p>‘ನಾನೀಗ ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಬಿಎಸ್ಪಿ ಹೀಗೆ ಯಾವುದೇ ಪಕ್ಷದಲ್ಲಿ ಇಲ್ಲ ಸ್ವತಂತ್ರವಾಗಿದ್ದೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>