ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಯಡಿಯೂರಪ್ಪ ನಡುವಿನ ಮಾತಿನ ಸಮರ ಮತ ಚಲಾವಣೆ ದಿನವೂ(ಮೇ 12) ಮುಂದುವರಿದಿದೆ.
ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಮೇ 17 ರಂದು ತಾವು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದಾಗಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದರು.
ಈ ಹೇಳಿಕೆ ಸಂಬಂಧ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ನೋಡಿ, ಯಡಿಯೂರಪ್ಪ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಕಾಂಗ್ರೆಸ್ 120 ಸ್ಥಾನಗಳನ್ನು ಗೆಲ್ಲಲಿದೆ. ನನಗೆ ಸಂಪೂರ್ಣ ವಿಶ್ವಾಸವಿದೆ’ ಎಂದು ಹೇಳಿದ್ದಾರೆ.
ಪುತ್ರ ಯತೀಂದ್ರ ಸಿದ್ದರಾಮಯ್ಯ ಜೊತೆ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಮತ ಚಲಾಯಿಸಿದರು.
‘ಕರ್ನಾಟಕದ ಜನರು ಯಾವಾಗಲೂ ರಾಜಕೀಯವಾಗಿ ಪ್ರಬುದ್ಧತೆಯನ್ನು ಪ್ರದರ್ಶಿಸುತ್ತಾರೆ. ದೇಶಕ್ಕೆ ಅತ್ಯಂತ ಅವಶ್ಯಕವಾಗಿರುವ ಬದಲಾವಣೆ ಪ್ರಾರಂಭವಾಗಲಿದೆ. ದಯಮಾಡಿ ಮನೆಯಿಂದ ಹೊರಬಂದು ಸಮಗ್ರ ಹಾಗೂ ಶಾಂತಿಯುತ ಕರ್ನಾಟಕಕ್ಕಾಗಿ ಮತ ಚಲಾಯಿಸಿ’ ಎಂದು ತಮ್ಮ ಟ್ವಿಟರ್ ಮೂಲಕ ಮನವಿ ಮಾಡಿದ್ದಾರೆ.
My son Dr Yatindra Siddaramaiah & I have cast our vote in Varuna today.
Karnataka voters as always will display political maturity & will begin a change that our country needs the most.