‘20 ವರ್ಷಗಳಿಂದ ಸಾವಿರಾರು ಕಾರ್ಯಕರ್ತರು ಹಾಗೂ ನಾನು ಕಾಗವಾಡ ಕ್ಷೇತ್ರದಲ್ಲಿ ಬಿಜೆಪಿಯನ್ನು ಬೇರು ಮಟ್ಟದಿಂದ ಸಂಘಟಿಸಿದ್ದೇನೆ. 4 ಬಾರಿ ಶಾಸಕನಾಗಿ ಆಯ್ಕೆಯಾಗಿ ಜನಪರ ಕಾರ್ಯಗಳನ್ನು ಮಾಡಿದ ತೃಪ್ತಿ ಇದೆ. ಈಗ ಬದಲಾದ ರಾಜಕೀಯ ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ಮಾಡಬೇಕಾಗುತ್ತದೆ. ನನ್ನನ್ನೇ ನಂಬಿದ 60ಸಾವಿರ ಕಾರ್ಯಕರ್ತರಿದ್ದಾರೆ. ಹಿಂದಿನಿಂದಲೂ ವಿರೋಧ ಪಕ್ಷದ ಅಭ್ಯರ್ಥಿ ವಿರುದ್ಧ ಸಂಘರ್ಷ ಮಾಡುತ್ತಾ ಬಂದಿದ್ದೇವೆ, ಈಗ ಒಮ್ಮೆಲೇ ಅನರ್ಹ ಶಾಸಕರು ಪಕ್ಷಕ್ಕೆ ಬಂದರೆ ಅವರೊಂದಿಗೆ ನಮಗೆ ಹೊಂದಾಣಿಕೆ ಆಗುವುದಿಲ್ಲ ಎಂದು ನಮ್ಮ ಕಾರ್ಯಕರ್ತರು ಹೇಳುತ್ತಿದ್ದಾರೆ’ ಎಂದರು.