ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಹಣ ಪಡೆದಿದ್ದರೆ ನಾನಿಲ್ಲಿ ಅಭ್ಯರ್ಥಿಯೇ ಆಗುತ್ತಿರಲಿಲ್ಲ. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಮ್ಮ ಟಿಕೆಟ್ ನನಗೆ ಬಿಟ್ಟುಕೊಟ್ಟಿದ್ದಾರೆ. ನಾನು ಹಿಂದಿನಿಂದಲೂ ಜನರ ಪರವಾಗಿ ಮಾಡುತ್ತಿರುವ ಹೋರಾಟಕ್ಕೆ ಗೌರವ ಕೊಟ್ಟು ಪ್ರೀತಿ, ವಿಶ್ವಾಸದಿಂದ ಅವಕಾಶ ಮಾಡಿಕೊಟ್ಟಿದ್ದಾರೆ. ಹೀಗಾಗಿ, ಅವರಿಗೆ ಧನ್ಯವಾದ ಹೇಳುತ್ತೇನೆ’ ಎಂದರು.