<p><strong>ಬೆಳಗಾವಿ:</strong> ‘ನಮಗೆ ಬಹಳ ತ್ರಾಸಾಗಿದೆ, ಒಂದೆರಡು ದಿನ ವೈನ್ ಶಾಪ್ ಚಾಲೂ ಮಾಡಿಸಿ ಎಂದುಕೊಂಡು ಕೆಲವರು ನನಗೆ ಕರೆ ಮಾಡಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು.</p>.<p>ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೊರೊನಾ ವೈರಾಣು ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ದೇಶದಾದ್ಯಂತ 21 ದಿನ ಲಾಕ್ಡೌನ್ ಘೋಷಿಸಲಾಗಿದೆ. ಈ ದಿನಗಳಲ್ಲಿ ಮದ್ಯ ಕುಡಿಯದೆ ಇದ್ದರೆ ಏನೂ ತೊಂದರೆ ಆಗುವುದಿಲ್ಲ. ಆದರೂ ನನಗೆ 2–3 ಕರೆಗಳು ಬಂದಿವೆ’ ಎಂದರು.</p>.<p>‘ಜನರು ಸಂಯಮ ಇಟ್ಟುಕೊಳ್ಳಬೇಕು. ನಿಯಮಗಳನ್ನು ಪಾಲಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ದಿನಪತ್ರಿಕೆಗಳಿಂದ ಕೊರೊನಾ ವೈರಾಣು ಸೋಂಕು ಹರಡುತ್ತದೆ ಎನ್ನುವುದು ಶುದ್ಧ ಸುಳ್ಳು. ಪತ್ರಿಕೆಗಳಿಂದ ಸೋಂಕು ಹರಡುವುದಿಲ್ಲ ಎನ್ನುವುದು ದೃಢಪಟ್ಟಿದೆ. ಹೀಗಾಗಿ, ಜನರು ವದಂತಿಗಳನ್ನು ನಂಬಬಾರದು’ ಎಂದು ಕೋರಿದರು.</p>.<p>‘ಗಡಿಯಲ್ಲಿ ಸರಕು ಸಾಗಣೆಗೆ ಯಾವುದೇ ನಿರ್ಬಂಧವಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ನಮಗೆ ಬಹಳ ತ್ರಾಸಾಗಿದೆ, ಒಂದೆರಡು ದಿನ ವೈನ್ ಶಾಪ್ ಚಾಲೂ ಮಾಡಿಸಿ ಎಂದುಕೊಂಡು ಕೆಲವರು ನನಗೆ ಕರೆ ಮಾಡಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು.</p>.<p>ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೊರೊನಾ ವೈರಾಣು ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ದೇಶದಾದ್ಯಂತ 21 ದಿನ ಲಾಕ್ಡೌನ್ ಘೋಷಿಸಲಾಗಿದೆ. ಈ ದಿನಗಳಲ್ಲಿ ಮದ್ಯ ಕುಡಿಯದೆ ಇದ್ದರೆ ಏನೂ ತೊಂದರೆ ಆಗುವುದಿಲ್ಲ. ಆದರೂ ನನಗೆ 2–3 ಕರೆಗಳು ಬಂದಿವೆ’ ಎಂದರು.</p>.<p>‘ಜನರು ಸಂಯಮ ಇಟ್ಟುಕೊಳ್ಳಬೇಕು. ನಿಯಮಗಳನ್ನು ಪಾಲಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ದಿನಪತ್ರಿಕೆಗಳಿಂದ ಕೊರೊನಾ ವೈರಾಣು ಸೋಂಕು ಹರಡುತ್ತದೆ ಎನ್ನುವುದು ಶುದ್ಧ ಸುಳ್ಳು. ಪತ್ರಿಕೆಗಳಿಂದ ಸೋಂಕು ಹರಡುವುದಿಲ್ಲ ಎನ್ನುವುದು ದೃಢಪಟ್ಟಿದೆ. ಹೀಗಾಗಿ, ಜನರು ವದಂತಿಗಳನ್ನು ನಂಬಬಾರದು’ ಎಂದು ಕೋರಿದರು.</p>.<p>‘ಗಡಿಯಲ್ಲಿ ಸರಕು ಸಾಗಣೆಗೆ ಯಾವುದೇ ನಿರ್ಬಂಧವಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>