‘ನಾನು ಹಿಂದೆ ಸಚಿವನಾಗಿದ್ದ ಸಮಯದಲ್ಲಿ ಬೆಂಗಳೂರು ನಗರ ವರ್ತುಲ ರಸ್ತೆ ನಿರ್ಮಾಣಕ್ಕೆ ₹4 ಸಾವಿರ ಕೋಟಿ ಮೊತ್ತದ ಯೋಜನೆ ರೂಪಿಸಲಾಗಿತ್ತು. ದಾಬಸ್ಪೇಟೆ– ಸೋಲೂರು– ಮಾಗಡಿ– ರಾಮನಗರ– ಕನಕಪುರ– ಆನೇಕಲ್– ಹೊಸಕೋಟೆ– ದೊಡ್ಡಬಳ್ಳಾಪುರ– ದೇವನಹಳ್ಳಿ ಮೂಲಕ ಸಂಪರ್ಕ ಕಲ್ಪಿಸಲು ಉದ್ದೇಶಿಸಲಾಗಿತ್ತು. ಆದರೆ ಈವರೆಗೂ ಯೋಜನೆ ಜಾರಿಯಾಗಿಲ್ಲ. ಪ್ರಸ್ತುತ ಯೋಜನಾ ವೆಚ್ಚ ₹17 ಸಾವಿರ ಕೋಟಿಗೆ ಏರಿಕೆ ಆಗಿದೆ. ಕೆಲಸ ಮಾಡುವುದಿಲ್ಲ, ಕೆಲಸ ಮಾಡಲು ಮುಂದಾದರೆ ಅದಕ್ಕೂ ಅವಕಾಶ ನೀಡುವುದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.