’ಮುಖ್ಯಮಂತ್ರಿ ಕುಮಾರಸ್ವಾಮಿ ಅಮೆರಿಕಪ್ರವಾಸ ಮುಗಿಸಿ ಬಂದ ಬಳಿಕ ಜೆಡಿಎಸ್ ಕಾಂಗ್ರೆಸ್ ಶಾಸಕರೊಂದಿಗೆ ಚರ್ಚೆ ನಡೆಸುತ್ತೇವೆ. ಈ ಹಿಂದೆ ಜೆಡಿಎಸ್–ಕಾಂಗ್ರೆಸ್ ಜಂಟಿ ಶಾಸಕಾಂಗ ಸಭೆ ನಡೆಸುವ ಬಗ್ಗೆ ತೀರ್ಮಾನಿಸಿದ್ದೆವು. ಆದರೆ, ಸಿಎಲ್ಪಿಯಲ್ಲಿ ಶಾಸಕರು ತಮ್ಮ ಎಲ್ಲ ಸಮಸ್ಯೆಗಳನ್ನು ಹೇಳಿಕೊಳ್ಳೋಕೆ ಆಗಲ್ಲ. ಹಾಗಾಗಿ ಪ್ರತ್ಯೇಕವಾಗಿ ಮಾತುಕತೆ ನಡೆಸುತ್ತೇವೆ’ ಎಂದರು.