ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾನು ಪಕ್ಷದ ನಿಷ್ಠಾವಂತ‌ ಕಾರ್ಯಕರ್ತ: ನಳಿನ್ ಕುಮಾರ್ ಕಟೀಲ್  

Last Updated 21 ಆಗಸ್ಟ್ 2019, 6:04 IST
ಅಕ್ಷರ ಗಾತ್ರ

ಮಂಗಳೂರು: ನಾನು ಪಕ್ಷದ ನಿಷ್ಠಾವಂತ‌‌ ಕಾರ್ಯಕರ್ತ.‌ ಪಕ್ಷ ವಹಿಸಿರುವ‌ ಕಾರ್ಯವನ್ನು ನಿಭಾಯಿಸುತ್ತೇನೆ ಎಂದು ಬಿಜೆಪಿ ರಾಜ್ಯ ಘಟಕದ ನೂತನ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

‘ಪಕ್ಷದಲ್ಲಿ‌ ಅನೇಕ ಹಿರಿಯರಿದ್ದಾರೆ. ಕೋಟ್ಯಂತರ ಕಾರ್ಯಕರ್ತರಿದ್ದಾರೆ. ಅವರೆಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸುತ್ತೇನೆ. ಪಕ್ಷದ ಮುಂದಿರುವ‌‌ ಸವಾಲುಗಳನ್ನು ಎದುರಿಸುವ‌ ನಿಟ್ಟಿನಲ್ಲಿ ಕಾರ್ಯೋನ್ಮುಖನಾಗುತ್ತೇನೆ’ಎಂದು ತಿಳಿಸಿದರು.

ಕೇರಳದಿಂದ ರೈಲಿನ ಮೂಲಕ ಬೆಳಿಗ್ಗೆ ಮಂಗಳೂರಿಗೆ ಬಂದ ಬಿಜೆಪಿ ರಾಜ್ಯ ಘಟಕದ ನೂತನ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಕಾರ್ಯಕರ್ತರು ಬುಧವಾರ ಅದ್ಧೂರಿಯಾಗಿ ಸ್ವಾಗತಿಸಿದರು.

ನಳಿನ್ ಕುಮಾರ್ ಕಟೀಲ್ ಅವರು ಸ್ವಗೃಹಕ್ಕೆ ತೆರಳಿ ತಾಯಿಯ ಆಶೀರ್ವಾದ ಪಡೆದು ಮನೆಯವರಿಗೆ ಸಿಹಿ ಹಂಚಿದರು.
ನಳಿನ್ ಕುಮಾರ್ ಕಟೀಲ್ ಅವರು ಸ್ವಗೃಹಕ್ಕೆ ತೆರಳಿ ತಾಯಿಯ ಆಶೀರ್ವಾದ ಪಡೆದು ಮನೆಯವರಿಗೆ ಸಿಹಿ ಹಂಚಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT