ಅದರಂತೆ ನಾಗೇಶ್, ಶ್ರೀನಿವಾಸ್ ಅವರಿಂದ ಕೆಫೆ ಕಾಫಿ ಡೇಯಲ್ಲಿ ಲಂಚದ ಹಣ ಸ್ವೀಕರಿಸುವಾಗ ಸಿಬಿಐ ಅಧಿಕಾರಿಗಳು ಬಂಧಿಸಿದರು. ಆನಂತರ ನರೇಂದ್ರ ಸಿಂಗ್ ಅವರನ್ನು ಬಂಧಿಸಲಾಯಿತು. ಈ ಇಬ್ಬರು ಅಧಿಕಾರಿಗಳನ್ನು ಗುರುವಾರ ಅಮಾನತು ಮಾಡುವ ಸಾಧ್ಯತೆ ಇದೆ. ಕರ್ನಾಟಕ ಹಾಗೂ ಗೋವಾ ವೃತ್ತದ ಆದಾಯ ತೆರಿಗೆ ಅಧಿಕಾರಿಗಳು ಇತ್ತೀಚಿನ ವರ್ಷಗಳಲ್ಲಿ ಲಂಚ ಸ್ವೀಕರಿಸಿದ ಮೊದಲ ಪ್ರಕರಣ ಇದು ಎನ್ನಲಾಗಿದೆ.