<p><strong>ಬೆಂಗಳೂರು:</strong>‘ನಾನು ಇಂದು ಕಚೇರಿಯಲ್ಲಿರುತ್ತೇನೆ. ರಾಜೀನಾಮೆ ನೀಡಿರುವ ಶಾಸಕರು ಬಂದು ಭೇಟಿಯಾಗಬಹುದು ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.</p>.<p>ರಾಜೀನಾಮೆ ನೀಡಿದ್ದ ಅತೃಪ್ತ ಶಾಸಕರಿಗೆ ಸಭಾಧ್ಯಕ್ಷರು ಮಂಗಳವಾರದವರೆಗೆ ಸಮಯಾವಕಾಶ ನೀಡಿದ್ದರು. ಇಂದು ಕಚೇರಿಗೆ ಬಂದಿರುವ ರಮೇಶ್ ಕುಮಾರ್ ಅವರು, ‘ಸಂವಿಧಾನಕ್ಕೆ ಬದ್ಧವಾಗಿ ನನ್ನ ಜವಾಬ್ದಾರಿ ನಿರ್ವಹಿಸುತ್ತೇನೆ’ ಎಂದು ತಿಳಿಸಿದ್ದಾರೆ.</p>.<p>‘ಅತೃಪ್ತ ಶಾಸಕರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಯಾವುದೇ ದೂರು ಬಂದಿಲ್ಲ. ಸಭಾಧ್ಯಕ್ಷರ ಕಚೇರಿಗೆ ದೂರು ನೀಡಿದ್ದರೆ, ಅದನ್ನು ಪರಿಶೀಲಿಸುತ್ತೇನೆ’ ಎಂದು ವಿವರಿಸಿದರು.</p>.<p>‘ನಾನು ಇದೀಗ ತಾನೆ ವಿಧಾನಸೌಧಕ್ಕೆ ಬಂದಿದ್ದೇನೆ. ಅವರು ಸಲ್ಲಿಸಿರುವ ಪತ್ರಗಳನ್ನು ಪರಿಶೀಲಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ’ ಎಂದು ರಮೇಶ್ ಕುಮಾರ್ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದರು.</p>.<p>‘ನಾನು ತೀರಾ ಸಾಧಾರಣ ಕುಟುಂಬದಿಂದ ಬಂದವನು. ಆದರೆ ತುಂಬಾ ಮುಖ್ಯವಾದ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದೇನೆ. ನಾನು ನನ್ನ ಸ್ಥಾನಕ್ಕೆ ಅನ್ಯಾಯ ಮಾಡುವುದಿಲ್ಲ. ಸಂವಿಧಾನ, ಕಾನೂನು, ಜನರ ಆಶೋತ್ತರಗಳನ್ನು ಗಮನಿಸಿ ನನ್ನ ವಿವೇಚನಾ ಅಧಿಕಾರವನ್ನು ಚಲಾಯಿಸುತ್ತಾನೆ’ ಎಂದು ಅವರು ಹೇಳಿದರು.</p>.<p>‘ನನಗೆ ನಾಯಕರು ನನ್ನರಾಜ್ಯದ ಜನ, ಸಂವಿಧಾನ ಮತ್ತು ಪಾಪಪ್ರಜ್ಞೆ ಮಾತ್ರ. ನಾನು ಯಾರ ಮುಲಾಜಿಗೂ ಒಳಪಟ್ಟು ಅಧಿಕಾರ ಚಲಾಯಿಸುವುದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>‘ನಾನು ಇಂದು ಕಚೇರಿಯಲ್ಲಿರುತ್ತೇನೆ. ರಾಜೀನಾಮೆ ನೀಡಿರುವ ಶಾಸಕರು ಬಂದು ಭೇಟಿಯಾಗಬಹುದು ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.</p>.<p>ರಾಜೀನಾಮೆ ನೀಡಿದ್ದ ಅತೃಪ್ತ ಶಾಸಕರಿಗೆ ಸಭಾಧ್ಯಕ್ಷರು ಮಂಗಳವಾರದವರೆಗೆ ಸಮಯಾವಕಾಶ ನೀಡಿದ್ದರು. ಇಂದು ಕಚೇರಿಗೆ ಬಂದಿರುವ ರಮೇಶ್ ಕುಮಾರ್ ಅವರು, ‘ಸಂವಿಧಾನಕ್ಕೆ ಬದ್ಧವಾಗಿ ನನ್ನ ಜವಾಬ್ದಾರಿ ನಿರ್ವಹಿಸುತ್ತೇನೆ’ ಎಂದು ತಿಳಿಸಿದ್ದಾರೆ.</p>.<p>‘ಅತೃಪ್ತ ಶಾಸಕರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಯಾವುದೇ ದೂರು ಬಂದಿಲ್ಲ. ಸಭಾಧ್ಯಕ್ಷರ ಕಚೇರಿಗೆ ದೂರು ನೀಡಿದ್ದರೆ, ಅದನ್ನು ಪರಿಶೀಲಿಸುತ್ತೇನೆ’ ಎಂದು ವಿವರಿಸಿದರು.</p>.<p>‘ನಾನು ಇದೀಗ ತಾನೆ ವಿಧಾನಸೌಧಕ್ಕೆ ಬಂದಿದ್ದೇನೆ. ಅವರು ಸಲ್ಲಿಸಿರುವ ಪತ್ರಗಳನ್ನು ಪರಿಶೀಲಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ’ ಎಂದು ರಮೇಶ್ ಕುಮಾರ್ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದರು.</p>.<p>‘ನಾನು ತೀರಾ ಸಾಧಾರಣ ಕುಟುಂಬದಿಂದ ಬಂದವನು. ಆದರೆ ತುಂಬಾ ಮುಖ್ಯವಾದ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದೇನೆ. ನಾನು ನನ್ನ ಸ್ಥಾನಕ್ಕೆ ಅನ್ಯಾಯ ಮಾಡುವುದಿಲ್ಲ. ಸಂವಿಧಾನ, ಕಾನೂನು, ಜನರ ಆಶೋತ್ತರಗಳನ್ನು ಗಮನಿಸಿ ನನ್ನ ವಿವೇಚನಾ ಅಧಿಕಾರವನ್ನು ಚಲಾಯಿಸುತ್ತಾನೆ’ ಎಂದು ಅವರು ಹೇಳಿದರು.</p>.<p>‘ನನಗೆ ನಾಯಕರು ನನ್ನರಾಜ್ಯದ ಜನ, ಸಂವಿಧಾನ ಮತ್ತು ಪಾಪಪ್ರಜ್ಞೆ ಮಾತ್ರ. ನಾನು ಯಾರ ಮುಲಾಜಿಗೂ ಒಳಪಟ್ಟು ಅಧಿಕಾರ ಚಲಾಯಿಸುವುದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>