ಗುರುವಾರ ತಾಲ್ಲೂಕಿನ ಅಂಬೇವಾಡಿಯಲ್ಲಿ ಮಾತನಾಡಿದ ಅವರು, ‘ಪ್ರವಾಹದಿಂದ ಮನೆ ಕಳೆದುಕೊಂಡ ಕ್ಷೇತ್ರದ ಜನರ ಬದುಕು ಬೀದಿಗೆ ಬಂದಿದೆ. ಕಷ್ಟ ಕಾಲದಲ್ಲಿ ನನ್ನ ನೆರವಿಗೆ ನಿಂತ ಅವರಿಗಾಗಿ ನೆರವಾಗಬೇಕಿದೆ. ಗಣೇಶ ಹಬ್ಬದ ನಂತರ ಕ್ಷೇತ್ರದ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಸದಸ್ಯರು ಸೇರಿದಂತೆ 200 ಬೆಂಬಲಿಗರು ಬೆಂಗಳೂರಿನಲ್ಲಿ ಭಿಕ್ಷೆ ಎತ್ತುತ್ತೇವೆ. ಸಂಘ–ಸಂಸ್ಥೆಗಳವರಿಂದ ಚಂದಾ ಎತ್ತಿ ಜನರಿಗೆ ಹೊಸ ಬದುಕು ಕಟ್ಟಿಕೊಡುತ್ತೇನೆ’ ಎಂದರು.