<p><strong>ಬೆಂಗಳೂರು:</strong> ಮುಂದಿನ 30 ವರ್ಷಗಳ ನೀರಾವರಿ ಯೋಜನೆಗಳ ಅನುಷ್ಠಾನದ ಉದ್ದೇಶದಿಂದ ಕರ್ನಾಟಕ ರಾಜ್ಯ ನೀರಾವರಿ ಆಯೋಗ ಸ್ಥಾಪನೆ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚೆ ಮಾಡುವುದಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.</p>.<p>ರಾಜ್ಯ ಸರ್ಕಾರದ ನಿವೃತ್ತ ಕಾರ್ಯದರ್ಶಿ ಕ್ಯಾ. ರಾಜಾರಾವ್ ಅವರೊಂದಿಗೆ ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದ ನಂತರ ಮಾತನಾಡಿದ ಅವರು, ‘ಕುಡಿಯುವ ನೀರು, ಅಂತರ್ಜಲ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ ನೀರಿನ ಬಳಕೆ ಕುರಿತಂತೆ ದೂರದೃಷ್ಟಿಯ ನೀಲನಕ್ಷೆ ಸಿದ್ದಪಡಿಸಲಾಗುವುದು. ಮುಂದಿನ ಮಳೆಗಾಲದಲ್ಲಿ ಅತಿವೃಷ್ಠಿ ತಡೆಗೆ ವ್ಯಾಪಕ ಕ್ರಮ ಕೈಗೊಳ್ಳಲಾಗಿದೆ. ನಮ್ಮ ನೀರನ್ನು ಉಳಿಸಿಕೊಂಡು ಯೋಜನೆಗಳನ್ನು ಪ್ರಾರಂಭಿಸುತ್ತೇವೆ’ ಎಂದರು.</p>.<p>ನೀರಿನ ಸದ್ಬಳಕೆಗೆ ಅಂತರ ರಾಜ್ಯ ನದಿ ಜೋಡಣೆ ಮಾಡಬೇಕಾದ ಅಗತ್ಯವಿದೆ. ಇದರಿಂದ ರಾಜ್ಯದ ನೀರಿನ ಪಾಲು ಕೂಡಾ ಹೆಚ್ಚಾಗಲಿದೆ. ಹಾಗಾಗಿ ಕೇಂದ್ರ ಸರ್ಕಾರದ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಈ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು.</p>.<p>ಹನಿ ನೀರಾವರಿ ಯೋಜನೆಗಳ ಅನುಷ್ಠಾನ ಕುರಿತು ವಿಸ್ತೃತ ನೀತಿ ರೂಪಿಸುತ್ತೇವೆ. ದೊಡ್ಡ ಮಟ್ಟದ ಏತ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಸರ್ಕಾರ, ನೀತಿಯನ್ನು ರೂಪಿಸಬೇಕಾಗಿದ್ದು ಈ ಕುರಿತಂತೆ ಇಲಾಖೆಯ ಮಟ್ಟದಲ್ಲಿ ಚರ್ಚೆ ಮಾಡಿ ಶೀಘ್ರವಾಗಿ ತೀರ್ಮಾನವನ್ನು ಕೈಗೊಳ್ಳಲಾಗುವುದೆಂದು ತಿಳಿಸಿದರು.</p>.<p>ಕೃಷ್ಣ ನದಿ ನೀರಿನ ಸದ್ಬಳಕೆಗಾಗಿ ಕೂಡಲೇ ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಈ ಕುರಿತಂತೆ ನವದೆಹಲಿಗೆ ತೆರಳಿ ಕೇಂದ್ರದ ಜಲಶಕ್ತಿ ಸಚಿವರೊಂದಿಗೆ ಈ ಕುರಿತು ಮಾತನಾಡಿ ಕೂಡಲೇ ಅಧಿಸೂಚನೆ ಹೊರಡಿಸಲು ಮನವಿ ಮಾಡುತ್ತೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಂದಿನ 30 ವರ್ಷಗಳ ನೀರಾವರಿ ಯೋಜನೆಗಳ ಅನುಷ್ಠಾನದ ಉದ್ದೇಶದಿಂದ ಕರ್ನಾಟಕ ರಾಜ್ಯ ನೀರಾವರಿ ಆಯೋಗ ಸ್ಥಾಪನೆ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚೆ ಮಾಡುವುದಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.</p>.<p>ರಾಜ್ಯ ಸರ್ಕಾರದ ನಿವೃತ್ತ ಕಾರ್ಯದರ್ಶಿ ಕ್ಯಾ. ರಾಜಾರಾವ್ ಅವರೊಂದಿಗೆ ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದ ನಂತರ ಮಾತನಾಡಿದ ಅವರು, ‘ಕುಡಿಯುವ ನೀರು, ಅಂತರ್ಜಲ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ ನೀರಿನ ಬಳಕೆ ಕುರಿತಂತೆ ದೂರದೃಷ್ಟಿಯ ನೀಲನಕ್ಷೆ ಸಿದ್ದಪಡಿಸಲಾಗುವುದು. ಮುಂದಿನ ಮಳೆಗಾಲದಲ್ಲಿ ಅತಿವೃಷ್ಠಿ ತಡೆಗೆ ವ್ಯಾಪಕ ಕ್ರಮ ಕೈಗೊಳ್ಳಲಾಗಿದೆ. ನಮ್ಮ ನೀರನ್ನು ಉಳಿಸಿಕೊಂಡು ಯೋಜನೆಗಳನ್ನು ಪ್ರಾರಂಭಿಸುತ್ತೇವೆ’ ಎಂದರು.</p>.<p>ನೀರಿನ ಸದ್ಬಳಕೆಗೆ ಅಂತರ ರಾಜ್ಯ ನದಿ ಜೋಡಣೆ ಮಾಡಬೇಕಾದ ಅಗತ್ಯವಿದೆ. ಇದರಿಂದ ರಾಜ್ಯದ ನೀರಿನ ಪಾಲು ಕೂಡಾ ಹೆಚ್ಚಾಗಲಿದೆ. ಹಾಗಾಗಿ ಕೇಂದ್ರ ಸರ್ಕಾರದ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಈ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು.</p>.<p>ಹನಿ ನೀರಾವರಿ ಯೋಜನೆಗಳ ಅನುಷ್ಠಾನ ಕುರಿತು ವಿಸ್ತೃತ ನೀತಿ ರೂಪಿಸುತ್ತೇವೆ. ದೊಡ್ಡ ಮಟ್ಟದ ಏತ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಸರ್ಕಾರ, ನೀತಿಯನ್ನು ರೂಪಿಸಬೇಕಾಗಿದ್ದು ಈ ಕುರಿತಂತೆ ಇಲಾಖೆಯ ಮಟ್ಟದಲ್ಲಿ ಚರ್ಚೆ ಮಾಡಿ ಶೀಘ್ರವಾಗಿ ತೀರ್ಮಾನವನ್ನು ಕೈಗೊಳ್ಳಲಾಗುವುದೆಂದು ತಿಳಿಸಿದರು.</p>.<p>ಕೃಷ್ಣ ನದಿ ನೀರಿನ ಸದ್ಬಳಕೆಗಾಗಿ ಕೂಡಲೇ ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಈ ಕುರಿತಂತೆ ನವದೆಹಲಿಗೆ ತೆರಳಿ ಕೇಂದ್ರದ ಜಲಶಕ್ತಿ ಸಚಿವರೊಂದಿಗೆ ಈ ಕುರಿತು ಮಾತನಾಡಿ ಕೂಡಲೇ ಅಧಿಸೂಚನೆ ಹೊರಡಿಸಲು ಮನವಿ ಮಾಡುತ್ತೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>