ಈ ಕುರಿತುಟ್ವೀಟ್ ಮಾಡಿರುವ ಅವರು, ‘ಕರ್ನಾಟಕ ಪೊಲೀಸರು ರಾಜೇಂದ್ರ ಅವರ ಮೇಲೆ ದಬ್ಬಾಳಿಕೆ ನಡೆಸಿದ್ದಾರೆ. ತಳ್ಳಾಡಿದ್ದಾರೆ. ಹುತಾತ್ಮರ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಅವರನ್ನು ತಡೆಯಲಾಗಿದೆ. ಮಹಾರಾಷ್ಟ್ರ ಬಿಜೆಪಿ ಘಟಕಕ್ಕೆ ಇದನ್ನು ಖಂಡಿಸುವ ಧೈರ್ಯವಿದೆಯೇ? ನಾಳೆ (ಜನವರಿ 18) ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹೋಗುತ್ತೇನೆ; ಏನಾಗುತ್ತದೆಯೋ ನೋಡೋಣ’ ಎಂದು ಸವಾಲು ಹಾಕಿದ್ದಾರೆ.