ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮಾನತು ವಾಪಾಸ್‌ ಪಡೆಯುವಂತೆ ಕೆಪಿಸಿಸಿಗೆ ಕೇಳಲ್ಲ: ಶಾಸಕ ಜೆ.ಎನ್‌. ಗಣೇಶ್‌

Last Updated 28 ಮೇ 2019, 12:59 IST
ಅಕ್ಷರ ಗಾತ್ರ

ಕಂಪ್ಲಿ: ‘ನನ್ನ ಅಮಾನತು ಹಿಂದಕ್ಕೆ ಪಡೆಯುವಂತೆ ಕೆ.ಪಿ.ಸಿ.ಸಿ.ಯನ್ನು ಕೇಳುವುದಿಲ್ಲ. ಆದರೆ, ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಪಕ್ಷದ ಹಿರಿಯರು, ಕಾರ್ಯಕರ್ತರ ಅಭಿಪ್ರಾಯದಂತೆ ಮುನ್ನಡೆಯುವೆ’ ಎಂದು ಶಾಸಕ ಜೆ.ಎನ್‌. ಗಣೇಶ್‌ ತಿಳಿಸಿದ್ದಾರೆ.

‘ಆಪರೇಷನ್‌ ಕಮಲ’ದಲ್ಲಿ ಜೆ.ಎನ್‌. ಗಣೇಶ್‌ ಅವರ ಹೆಸರು ಕೇಳಿ ಬರುತ್ತಿರುವ ನಡುವೆ ಅವರಿಂದ ಈ ಹೇಳಿಕೆ ಹೊರಬಿದ್ದಿರುವುದು ಮಹತ್ವ ಪಡೆದುಕೊಂಡಿದೆ.

‘ಆನಂದಣ್ಣ (ಶಾಸಕ ಆನಂದ್‌ ಸಿಂಗ್) ನಾನು ಎರಡು ದಶಕಗಳಿಂದ ಚೆನ್ನಾಗಿದ್ದೇವೆ. ನಮ್ಮಿಬ್ಬರಲ್ಲಿ ಯಾವುದೇ ವೈರತ್ವವಿಲ್ಲ. ಇಂದಿಗೂ ಫೋನ್‌ ಸಂಪರ್ಕದಲ್ಲಿದ್ದೇವೆ. ರೆಸಾರ್ಟ್‌ ಗಲಾಟೆ ಉದ್ದೇಶ ಪೂರ್ವಕವಾಗಿ ನಡೆದಿಲ್ಲ. ಮೂರನೆಯವರು ಲಾಭ ಮಾಡಿಕೊಳ್ಳುವುದಕ್ಕಾಗಿ ಈ ಘಟನೆ ನಡೆದಿದೆ’ ಎಂದು ತಾಲ್ಲೂಕಿನ ರಾಮಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಭಿನ್ನಮತೀಯರ ಗುಂಪಿನಲ್ಲಿ ನಾನಿಲ್ಲ. ನನಗೆ ಕ್ಷೇತ್ರದ ಅಭಿವೃದ್ಧಿ ಮುಖ್ಯ. ಲೋಕಸಭೆ ಚುನಾವಣೆಯಲ್ಲಿ ನನ್ನ ಅನುಪಸ್ಥಿತಿಯಲ್ಲಿ ಕ್ಷೇತ್ರದ ಜನ ಕಾಂಗ್ರೆಸ್‌ ಪಕ್ಷಕ್ಕೆ ಹೆಚ್ಚಿನ ಮತ ನೀಡಿದ್ದಾರೆ. ಒಂದು ವೇಳೆ ನಾನು ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡಿದ್ದರೆ ಉಗ್ರಪ್ಪ ಅವರಿಗೆ ಕನಿಷ್ಠ 40 ಸಾವಿರ ಮತಗಳ ಲೀಡ್‌ ತಂದು ಕೊಡುತ್ತಿದ್ದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT