‘ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಇನ್ನೂ ತೀರ್ಮಾನ ಮಾಡಿಲ್ಲ. ಸಂಸತ್ತಿನಲ್ಲಿಯೂ ಇದೇ ನನ್ನ ಕೊನೆಯ ಭಾಷಣ, ಮಾತನಾಡಲು ಅವಕಾಶ ಕೊಡಿ ಅಂತ ಪ್ರಾರ್ಥನೆ ಮಾಡಿಕೊಂಡಿದ್ದೆ. ಆದರೆ, ಹೀಗೆಲ್ಲ ಮಾತನಾಡಬಾರದು ಎಂದು ಅನೇಕ ನಾಯಕರು ಹೇಳಿದರು. ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂಬ ಒತ್ತಡ ಹಲವೆಡೆಯಿಂದ ಬರುತ್ತಿದೆ. ರಾಷ್ಟ್ರಮಟ್ಟದ ಅನೇಕ ನಾಯಕರು ಚುನಾವಣೆ ಸ್ಪರ್ಧಿಸುವಂತೆ ಒತ್ತಾಯ ಮಾಡುತ್ತಿದ್ದಾರೆ. ಪರಿಸ್ಥಿತಿ ಹೇಗೆ ಬರುತ್ತದೆಯೋ ಗೊತ್ತಿಲ್ಲ. ಬಂದಹಾಗೆ ಸ್ವೀಕರಿಸುವೆ’ ಎಂದು ಗೌಡರು ಹೇಳಿದರು.