‘ಸಚಿವ ಸ್ಥಾನ ತಿರಸ್ಕರಿಸಿ ಗೋಕಾಕಕ್ಕೆ ಹೊರಟಿದ್ದೆ. ಆದರೆ, ಶಾಸಕರಾದ ಮಹೇಶ ಕುಮಠಳ್ಳಿ, ಬಾಲಚಂದ್ರ ಜಾರಕಿಹೊಳಿ ಕಾರಣದಿಂದ ಪ್ರಮಾಣವಚನ ಸ್ವೀಕರಿಸಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ವರಿಷ್ಠ ಅಮಿತ್ ಶಾ ಅವರನ್ನು ನಂಬಿದ್ದೇನೆ. ನೀರಾವರಿ ಖಾತೆ ಕೊಡ್ತಾರೋ, ಲೈಬ್ರರಿ ಕೊಡುತ್ತಾರೋ ಗೊತ್ತಿಲ್ಲ. ಆರ್ಎಸ್ಎಸ್ ನಾಯಕರೂ ಸಹಕಾರ ನೀಡುತ್ತಿದ್ದಾರೆ’ ಎಂದು ತಿಳಿಸಿದರು.