‘ಇತ್ತೀಚೆಗೆ ವಿ.ವಿ.ಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಬಂದಿದ್ದ ವಿ.ವಿ. ಮೊದಲ ಕುಲಪತಿ ಚಂದ್ರಶೇಖರ ಕಂಬಾರ ಅವರು ನನ್ನ ಕೆಲಸ ನೋಡಿ ಬಹಳ ಖುಷಿ ಪಟ್ಟಿದ್ದಾರೆ. ಇನ್ನೊಂದು ಅವಧಿಗೆ ನೀವೇ ಇದ್ದರೆ ಒಳ್ಳೆಯದು. ಒಳ್ಳೆಯ ಕೆಲಸಗಳಾಗುತ್ತವೆ ಎಂದೂ ಹೇಳಿದ್ದಾರೆ. ವಿ.ವಿ.ಯ ಕೆಲ ಅಧ್ಯಾಪಕರು ಕಂಬಾರ ಅವರನ್ನು ಭೇಟಿ ಮಾಡಿ, ನನ್ನನ್ನು ಎರಡನೇ ಅವಧಿಗೆ ಮುಂದುವರಿಸುವಂತೆ ಕೋರಿದ್ದಾರೆ. ಆದರೆ, ನನ್ನನ್ನೇ ಮುಂದುವರಿಸಬೇಕೆಂದು ಯಾರಿಗೂ ಕೇಳಿಕೊಂಡಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.