ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಕಾರ್ಯದರ್ಶಿಯಾಗಿ ಗಿರೀಶ್ ಹೊಸೂರ್‌ ನೇಮಕ

ಐಎಎಸ್‌, ಐಎಫ್‌ಎಸ್‌ ಅಧಿಕಾರಿಗಳ ವರ್ಗಾವಣೆ
Last Updated 9 ಏಪ್ರಿಲ್ 2020, 9:21 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಕಾರ್ಯದರ್ಶಿ ಆರ್‌. ವಿಶಾಲ್‌ ಅವರನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಏಜೆನ್ಸಿಯ ಆಯುಕ್ತರಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ಹುದ್ದೆ ನಿರೀಕ್ಷೆಯಲ್ಲಿದ್ದ ಐಎಫ್‌ಎಸ್‌ ಅಧಿಕಾರಿ ಗಿರೀಶ್ ಸಿ. ಹೊಸೂರ್‌ ಅವರನ್ನು ವಿಶಾಲ್‌ ಅವರ ಜಾಗಕ್ಕೆ ನೇಮಿಸಲಾಗಿದೆ.

ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ. ಅನಿರುದ್ಧ ಶ್ರವಣ್‌ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಆಯುಕ್ತರಾಗಿ ನಿಯೋಜಿಸಲಾಗಿದೆ.

ಉಪ ಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥನಾರಾಯಣ ಅವರ ಕಾರ್ಯದರ್ಶಿ ಪಿ. ಪ್ರದೀಪ್‌ ಅವರನ್ನು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಅವರಿಗೆ ಉಪ ಮುಖ್ಯಮಂತ್ರಿಯ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ವಹಿಸಲಾಗಿದೆ.

ಹುದ್ದೆ ನಿರೀಕ್ಷೆಯಲ್ಲಿದ್ದ ಕೆ. ಜ್ಯೋತಿ ಅವರನ್ನು ಖಾಲಿ ಇದ್ದ ಬೆಂಗಳೂರು ವಿಶ್ವವಿದ್ಯಾಲಯದ ರಿಜೆಸ್ಟ್ರಾರ್‌ (ಆಡಳಿತ) ಆಗಿ ನೇಮಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT