ದೂರವಾಣಿ ಮೂಲಕ 'ಪ್ರಜಾವಾಣಿ' ಜೊತೆ ಮಾತನಾಡಿದ ಅವರು, 'ಪ್ರಸಕ್ತ ಸಂದರ್ಭದಲ್ಲಿ ದೇಶದಲ್ಲಿ ನಡೆಯುತ್ತಿರುವ ವಿದ್ಯಮಾನಗಳೊಂದಿಗೆ ರಾಜಿ ಮಾಡಿಕೊಳ್ಳಲು ಆಗದೆ ರಾಜೀನಾಮೆ ನೀಡಿದ್ದೇನೆ. ನಾನು ಒಂದಷ್ಟು ಆದರ್ಶಗಳನ್ನು ಇರಿಸಿಕೊಂಡು ಬದುಕುತ್ತಿದ್ದೇನೆ. ತತ್ವ, ಸಿದ್ಧಾಂತ ನಂಬಿದ್ದೇನೆ. ದೇಶದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳು ಅವಕ್ಕೆ ವಿರುದ್ಧವಾಗಿ. ಈ ವಿಚಾರದಲ್ಲಿ ಹೊಂದಾಣಿಕೆ ಮಾಡಿಕೊಂಡು ಮುಂದುವರಿಯಲು ನನ್ನಿಂದ ಸಾಧ್ಯ ಆಗುತ್ತಿಲ್ಲ' ಎಂದರು.