ಉದ್ಯಮಿ ಮನ್ಸೂರ್ ಖಾನ್ ಒಡೆತನದ ‘ಐಎಂಎ’ ಕಂಪನಿ ವಂಚನೆ ಪ್ರಕರಣದಲ್ಲಿ ಲಂಚ ಪಡೆದ ಆರೋಪದಡಿ ಸಿಬಿಐ ಅಧಿಕಾರಿಗಳು, ವಿಜಯ್ಶಂಕರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣದ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನೂ ಸಲ್ಲಿಸಿದ್ದರು. ಇದೇ ಪ್ರಕರಣದಲ್ಲಿ ವಿಜಯ್ಶಂಕರ್ ಅವರನ್ನು ಅಮಾನತು ಮಾಡಲಾಗಿತ್ತು. ಅಂದಿನಿಂದ ಅವರು ಮನೆಯಲ್ಲೇ ಇದ್ದರು.