ಬೆಂಗಳೂರು: ಕಾರ್ಯದರ್ಶಿ ದರ್ಜೆಯ ಐವರು ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಸೋಮವಾರ ವರ್ಗಾವಣೆ ಮಾಡಿದೆ.
ಎಂ.ಮಹೇಶ್ವರ ರಾವ್–ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ರಾಜೇಂದ್ರಕುಮಾರ್ ಕಟಾರಿಯಾ– ಕಾರ್ಯದರ್ಶಿ, ಕೃಷಿ ಇಲಾಖೆ. ಜತೆಗೆ ತೋಟಗಾರಿಕಾ ಇಲಾಖೆಯ ಹೆಚ್ಚುವರಿ ಹೊಣೆ, ಅಮ್ಲಾನ್ ಆದಿತ್ಯ ಬಿಸ್ವಾಸ್– ಕಾರ್ಯದರ್ಶಿ, ಕೌಶಲ ಅಭಿವೃದ್ಧಿ ಇಲಾಖೆ.
ಯೋಜನಾ ಇಲಾಖೆಯ ಕಾರ್ಯದರ್ಶಿ ಚಕ್ರವರ್ತಿ ಮೋಹನ್ ಅವರಿಗೆ ಹೆಚ್ಚುವರಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಹುದ್ದೆ ವಹಿಸಲಾಗಿದೆ. ಪಶು ಸಂಗೋಪನೆ ಇಲಾಖೆ ಕಾರ್ಯದರ್ಶಿ ಎಂ. ಮಂಜುನಾಥ್ ನಾಯಕ್ ಅವರಿಗೆ ಕಾರ್ಮಿಕ ಇಲಾಖೆ ಕಾರ್ಯದರ್ಶಿ ಹುದ್ದೆಯನ್ನೂ ನೀಡಲಾಗಿದೆ.