ಮುಖ್ಯಮಂತ್ರಿ ತವರು ಜಿಲ್ಲೆಯಾದ ಶಿವಮೊಗ್ಗ ನಗರಪಾಲಿಕೆ ಆಯುಕ್ತರಾಗಿದ್ದ ರವಿ, ಅಲ್ಲಿ ಭ್ರಷ್ಟಾಚಾರ ತೊಡೆದು ಹಾಕುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಜನಪ್ರತಿನಿಧಿಗಳ ಸಿಟ್ಟಿಗೆ ಗುರಿಯಾಗಿ ಬೆಂಗಳೂರಿಗೆ ವರ್ಗಾವಣೆಯಾಗಿದ್ದರು. ಕೆಲಸ ಮಾಡಿದ ಅವಧಿಯಲ್ಲಿ ಶಿವಮೊಗ್ಗದ ಸೌಂದರ್ಯೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು.