<p><strong>ಬೆಂಗಳೂರು:</strong> 'ಕಾಂಗ್ರೆಸ್ ಪಕ್ಷದ ಬಾವುಟ ಹಿಡಿದು ಪಕ್ಷೇತರ ಅಭ್ಯರ್ಥಿ ಪರ ಕೆಲಸ ಮಾಡುವುದನ್ನು ನಾವು ಸಹಿಸುವುದಿಲ್ಲ. ಅಂಥವರು ಪಕ್ಷ ಬಿಟ್ಟು ಹೋಗಲಿ. ಒಂದು ವೇಳೆ ಹೋಗದಿದ್ದರೆ ನಾವೇ ಶಿಸ್ತು ಕ್ರಮ ತೆಗದುಕೊಳ್ಳುತ್ತೇವೆ' ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದರು.</p>.<p>ಮಾಧ್ಯಮ ಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು 'ನಮ್ಮ ಪಕ್ಷದ ಚಿಹ್ನೆ ಪಕ್ಷೇತರ ಅಭ್ಯರ್ಥಿ ಜೊತೆ ಕಾಣಿಸಿಕೊಳ್ಳಬಾರದು. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದೇವೆ. ಮುಖ್ಯಮಂತ್ರಿ ಜೊತೆಗೂ ಈ ಬಗ್ಗೆ ಚರ್ಚೆ ಮಾಡುತ್ತೇನೆ' ಎಂದರು.</p>.<p>'ಪಕ್ಷ ವಿರೋಧಿ ಕೆಲಸ ಯಾರು ಮಾಡಬಾರದು. ಈ ಬಗ್ಗೆ ರಾಹುಲ್ ಗಾಂಧಿ ಸ್ಪಷ್ಟ ಸೂಚನೆ ನೀಡಿದ್ದಾರೆ. ಮಂಡ್ಯದಲ್ಲಿ ನಮ್ಮ ಮೈತ್ರಿ ಅಭ್ಯರ್ಥಿ ಗೆಲ್ಲುವ ಸಾಧಿಸಲಿದ್ದಾರೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಹಾಸನ, ಮಂಡ್ಯ, ಮೈಸೂರು ಸೇರಿದಂತೆ ಎಲ್ಲ ಕಡೆ ದೇವೇಗೌಡರು ಮತ್ತು ಸಿದ್ದರಾಮಯ್ಯ ಪ್ರಚಾರ ಮಾಡಲಿದ್ದಾರೆ. ಆ ಸಂದರ್ಭದಲ್ಲಿ ಎಲ್ಲರೂ ಇರುವಂತೆ ಸೂಚಿಸಿದ್ದೇವೆ ಎಂದು ಹೇಳಿದರು.</p>.<p>ಮಂಡ್ಯ ಕಾಂಗ್ರೆಸ್ ನಾಯಕರ ಜೊತೆ ಮಂಗಳವಾರ ರಾತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಹಿಂದೆ ಮುಂಚೆ ಅವರೆಲ್ಲಾ ಒಂದೇ ಪಕ್ಷದಲ್ಲಿ ಇದ್ದವರು. ಕೆಲವು ಸಮಸ್ಯೆ ಇದೆ. ಅದನ್ನು ಬಗೆಹರಿಸುತ್ತೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> 'ಕಾಂಗ್ರೆಸ್ ಪಕ್ಷದ ಬಾವುಟ ಹಿಡಿದು ಪಕ್ಷೇತರ ಅಭ್ಯರ್ಥಿ ಪರ ಕೆಲಸ ಮಾಡುವುದನ್ನು ನಾವು ಸಹಿಸುವುದಿಲ್ಲ. ಅಂಥವರು ಪಕ್ಷ ಬಿಟ್ಟು ಹೋಗಲಿ. ಒಂದು ವೇಳೆ ಹೋಗದಿದ್ದರೆ ನಾವೇ ಶಿಸ್ತು ಕ್ರಮ ತೆಗದುಕೊಳ್ಳುತ್ತೇವೆ' ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದರು.</p>.<p>ಮಾಧ್ಯಮ ಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು 'ನಮ್ಮ ಪಕ್ಷದ ಚಿಹ್ನೆ ಪಕ್ಷೇತರ ಅಭ್ಯರ್ಥಿ ಜೊತೆ ಕಾಣಿಸಿಕೊಳ್ಳಬಾರದು. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದೇವೆ. ಮುಖ್ಯಮಂತ್ರಿ ಜೊತೆಗೂ ಈ ಬಗ್ಗೆ ಚರ್ಚೆ ಮಾಡುತ್ತೇನೆ' ಎಂದರು.</p>.<p>'ಪಕ್ಷ ವಿರೋಧಿ ಕೆಲಸ ಯಾರು ಮಾಡಬಾರದು. ಈ ಬಗ್ಗೆ ರಾಹುಲ್ ಗಾಂಧಿ ಸ್ಪಷ್ಟ ಸೂಚನೆ ನೀಡಿದ್ದಾರೆ. ಮಂಡ್ಯದಲ್ಲಿ ನಮ್ಮ ಮೈತ್ರಿ ಅಭ್ಯರ್ಥಿ ಗೆಲ್ಲುವ ಸಾಧಿಸಲಿದ್ದಾರೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಹಾಸನ, ಮಂಡ್ಯ, ಮೈಸೂರು ಸೇರಿದಂತೆ ಎಲ್ಲ ಕಡೆ ದೇವೇಗೌಡರು ಮತ್ತು ಸಿದ್ದರಾಮಯ್ಯ ಪ್ರಚಾರ ಮಾಡಲಿದ್ದಾರೆ. ಆ ಸಂದರ್ಭದಲ್ಲಿ ಎಲ್ಲರೂ ಇರುವಂತೆ ಸೂಚಿಸಿದ್ದೇವೆ ಎಂದು ಹೇಳಿದರು.</p>.<p>ಮಂಡ್ಯ ಕಾಂಗ್ರೆಸ್ ನಾಯಕರ ಜೊತೆ ಮಂಗಳವಾರ ರಾತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಹಿಂದೆ ಮುಂಚೆ ಅವರೆಲ್ಲಾ ಒಂದೇ ಪಕ್ಷದಲ್ಲಿ ಇದ್ದವರು. ಕೆಲವು ಸಮಸ್ಯೆ ಇದೆ. ಅದನ್ನು ಬಗೆಹರಿಸುತ್ತೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>