ಧಾರವಾಡದ ಕರ್ನಾಟಕ ರಾಜ್ಯ ಅರಣ್ಯ ಅಕಾಡೆಮಿಯ ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗದ ಹೆಚ್ಚುವರಿ ಪಿಸಿಸಿಎಫ್ ಆಗಿದ್ದ ಎ.ರಾಧಾ ದೇವಿ ಅವರನ್ನು ಜಲಸಂಪನ್ಮೂಲ ಇಲಾಖೆಯ ಭೂಸ್ವಾಧೀನ ಮತ್ತು ಅರಣ್ಯ ಘಟಕದ ಹೆಚ್ಚುವರಿ ಪಿಸಿಸಿಎಫ್ ಆಗಿ ನೇಮಿಸಲಾಗಿದೆ. ರಾಧಾ ದೇವಿ ಅವರ ವರ್ಗದಿಂದ ತೆರವಾದ ಹುದ್ದೆಗೆ ಬೆಂಗಳೂರಿನ ಪ್ರಚಾರ ಮತ್ತು ಐಸಿಟಿ ವಿಭಾಗದ ಹೆಚ್ಚುವರಿ ಪಿಸಿಸಿಎಫ್ ವಿಜಯಲಾಲ್ ಮೀನಾ ಅವರನ್ನು ನಿಯೋಜಿಸಲಾಗಿದೆ. ಡಿ.ಯತೀಶ್ ಕುಮಾರ್ ಅವರಿಗೆ 2008ರಿಂದಲೇ ಪೂರ್ವಾನ್ವಯವಾಗುವಂತೆ ಕರ್ನಾಟಕ ಐಎಫ್ಎಸ್ ವೃಂದಕ್ಕೆ ಬಡ್ತಿ ನೀಡಲಾಗಿದೆ.