ಹಾವೇರಿ:ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಮಾಗೋಡು ರಸ್ತೆ ಬದಿಯ ಗೋದಾಮಿನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದೆ ಎಂಬ ಶಂಕೆ ಮೇರೆಗೆ ರಾಣೆಬೆನ್ನೂರು ತಹಶೀಲ್ದಾರ್ ಕಚೇರಿ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಬುಧವಾರ ಬೆಳಿಗ್ಗೆ ದಾಳಿನಡೆಸಿದರು.
ಸುಮಾರು 260 ಚೀಲಗಳಲ್ಲಿನ ಅಕ್ಕಿ ಹಾಗೂ ತೊಗರಿಬೇಳೆಯನ್ನು ಅಧಿಕಾರಿಗಳುಪರಿಶೀಲನೆ ನಡೆಸಿದರು. ಪರಿಶೀಲನೆ ಬಳಿಕ ಕ್ರಮಕೈಗೊಳ್ಳುವುದಾಗಿ ಅಧಿಕಾರಿಗಳುತಿಳಿಸಿದ್ದಾರೆ.