‘ಕೆಲ ರಾಜಕಾರಣಿಗಳು ಹಾಗೂ ಸಮಾಜ ವಿರೋಧಿಗಳ ಒತ್ತಡದಿಂದ ಭಾರತ ಬಿಟ್ಟು ತಪ್ಪು ಮಾಡಿದೆ. ಭಾರತಕ್ಕೆ ವಾಪಸ್ ಬರುವುದಾಗಿ ಕಳೆದ ವಿಡಿಯೊದಲ್ಲಿ ಹೇಳಿದ್ದೆ. ನನ್ನ ಹೃದಯದಲ್ಲಿ ಮೂರು ರಂಧ್ರಗಳಿರುವುದಾಗಿ ವೈದ್ಯರು ಹೇಳಿದ್ದು, ಚಿಕಿತ್ಸೆ ಪಡೆಯಲೂ ಹಣವಿಲ್ಲದಂತಾಗಿದೆ. ಹೀಗಾಗಿ,24 ಗಂಟೆಯೊಳಗೆ ಭಾರತಕ್ಕೆ ಬರುತ್ತೇನೆ’ ಎಂದು ತಿಳಿಸಿದ್ದಾರೆ.