ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚಿತ್ರದುರ್ಗ, ಕೋಲಾರ ಹಾಗೂ ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಭೋವಿ ಜನಾಂಗದ ಹಲವರು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಸಮುದಾಯದ ಅಭ್ಯರ್ಥಿಗಳಿಗೆ ಪ್ರಾತಿನಿಧ್ಯ ನೀಡಬೇಕು. ಯಾವ ಪಕ್ಷವೂ ಸಮುದಾಯವನ್ನು ಗುರುತಿಸದೇ ಇದ್ದರೆ ಮುಂದಿನ ನಡೆಯ ಬಗ್ಗೆ ತೀರ್ಮಾನಿಸಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.