ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ | ಕೃಷ್ಣಾ ನದಿ ಹರಿವು ಹೆಚ್ಚಳ; ಏಳು ಬ್ಯಾರೇಜ್‌ ಜಲಾವೃತ 

Last Updated 9 ಜುಲೈ 2020, 7:18 IST
ಅಕ್ಷರ ಗಾತ್ರ

ಬೆಳಗಾವಿ: ದಕ್ಷಿಣ ಮಹಾರಾಷ್ಟ್ರದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಕೃಷ್ಣಾ ನದಿ ನೀರಿನ ಹರಿವು ಏರಿಕೆಯಾಗಿದೆ. ಜಿಲ್ಲೆಯ ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನ ಏಳು ಬ್ರಿಡ್ಜ್‌ ಕಮ್‌ ಬ್ಯಾರೇಜ್‌ಗಳು ಜಲಾವೃತವಾಗಿವೆ.

ದೂಧ್‌ಗಂಗಾ ನದಿಯಿಂದ15,488 ಕ್ಯುಸೆಕ್, ರಾಜಾಪುರ ಬ್ಯಾರೇಜ್‌ನಿಂದ46,750 ಕ್ಯುಸೆಕ್ ಸೇರಿದಂತೆ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ 62,228 ಕ್ಯುಸೆಕ್ ನೀರು ಸೇರಿಕೊಳ್ಳುತ್ತಿದೆ.

ಚಿಕ್ಕೋಡಿ ತಾಲ್ಲೂಕಿನ ಕೃಷ್ಣಾ ನದಿಯ ಕಲ್ಲೋಳ-ಯಡೂರ, ದೂಧಗಂಗಾ ನದಿಯ ಮಲಿಕವಾಡ-ದತ್ತವಾಡ, ನಿಪ್ಪಾಣಿ ತಾಲ್ಲೂಕಿನ ದೂಧಗಂಗಾ ನದಿಗೆ ಅಡ್ಡಲಾಗಿರುವ ಕಾರದಗಾ-ಭೋಜ, ವೇದಗಂಗಾ ನದಿಗೆ ಅಡ್ಡಲಾಗಿರುವ ಬಾರವಾಡ- ಕುನ್ನೂರ, ಕೊನ್ನೂರ-ಭೋಜವಾಡಿ, ಅಕ್ಕೋಳ- ಸಿದ್ನಾಳ, ಜತ್ರಾಟ- ಭೀವಶಿ ಸೇತುವೆಗಳು ಜಲಾವೃತಗೊಂಡಿವೆ. ಈ ಗ್ರಾಮಗಳಿಗೆ ಪರ್ಯಾಯ ರಸ್ತೆ ಸಂಪರ್ಕವಿದ್ದು, ಜನ ಸಂಚಾರಕ್ಕೆ ತೊಂದರೆಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT