ಬೆಂಗಳೂರು: 'ಕಾರ್ಮಿಕರ ದಿನದ ಕೆಲಸದ ಅವಧಿಯನ್ನು 9 ತಾಸುಗಳಿಂದ 10 ತಾಸುಗಳಿಗೆ ಹೆಚ್ಚಿಸಿ ಮೇ 22ರಂದು ಹೊರಡಿಸಿದ್ದ ಅಧಿಸೂಚನೆ ಹಿಂಪಡೆಯಲಾಗಿದೆ' ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ಅಧಿಸೂಚನೆ ರದ್ದುಪಡಿಸುವಂತೆ ಕೋರಿ ದೀಪಾಂಜಲಿ ನಗರದ ನಿವಾಸಿ ಎಚ್. ಮಾರುತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ಅಧಿಸೂಚನೆ ಹಿಂಪಡೆದಿರುವ ಕುರಿತಂತೆ ಕಾರ್ಮಿಕ ಇಲಾಖೆ ಉಪ ಕಾರ್ಯದರ್ಶಿಗಳ ಆದೇಶದ ಪ್ರತಿಯನ್ನು ಮೆಮೊ ಮೂಲಕ ನ್ಯಾಯಪೀಠಕ್ಕೆ ಸಲ್ಲಿಸಿದರು.
ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿ ವಿಲೇವಾರಿ ಮಾಡಿದೆ.