2017ರ ಡಿಸೆಂಬರ್ನಲ್ಲಿ ಬೈಲೂರು ಸಮೀಪದ ಯರ್ಲಪಾಡಿ ಹಾಗೂ ಎಳ್ಳಾರೆ ಎಂಬಲ್ಲಿ 2 ಚಿರತೆಗಳು ಮೃತಪಟ್ಟಿದ್ದವು. ಕೇವಲ 2 ಕಿ.ಮೀ ಅಂತದಲ್ಲಿ ಎರಡು ಚಿರತೆಗಳು ಸತ್ತಿದ್ದರಿಂದ ಸಾವಿನ ಬಗ್ಗೆ ಸಂಶಯ ಮೂಡಿತ್ತು. ಯಾರಾದರೂ ವಿಷ ಹಾಕಿ ಚಿರತೆಗಳನ್ನು ಕೊಂದಿರಬಹುದು, ಇಲ್ಲವೇ ಕಾಯಿಲೆಯಿಂದ ಮೃತಪಟ್ಟಿರಬಹುದು ಎಂಬ ಅನುಮಾನ ವ್ಯಕ್ತವಾಗಿತ್ತು.