ಜೆಡಿಎಸ್ ಮತ್ತು ಕಾಂಗ್ರೆಸ್ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದರೆ, ಅಂತಹ ಸಂದರ್ಭದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಲಹೆಯನ್ನು ಎಸ್.ಟಿ.ಸೋಮಶೇಖರ್ ಮತ್ತು ಎಂ.ಟಿ.ಬಿ ನಾಗರಾಜ್ ನೀಡಿದ್ದರು. ಇದಕ್ಕೆ ಪಕ್ಷ ಒಪ್ಪಿಕೊಳ್ಳಲಿಲ್ಲ. ಎಲ್ಲರೂ ಪಕ್ಷದ ಚಿಹ್ನೆಯಲ್ಲಿ ಸ್ಪರ್ಧಿಸಬೇಕು, ಗೆಲ್ಲಿಸಿ ಕೊಂಡು ಬರುವ ಜವಾಬ್ದಾರಿ ನಮ್ಮದು ಎಂಬುದಾಗಿ ಬಿಜೆಪಿ ಹೇಳಿತ್ತು.