ರಾಜ್ಯ ಸರ್ಕಾರ ಮಾರ್ಚ್ 23ರಂದು ಆಯುಕ್ತರ ನೇಮಕ ಮಾಡಿತ್ತು. ಕೋರ್ಟ್ಗೆ ಅಡ್ವೊಕೇಟ್ ಜನರಲ್ ನೀಡಿದ್ದ ಮುಚ್ಚಳಿಕೆ ಉಲ್ಲಂಘಿಸಿ ಈ ನೇಮಕ ಪ್ರಕ್ರಿಯೆ ನಡೆಸಲಾಗಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಮೊಹಮ್ಮದ್ ವಜೀರ್ ಅಹ್ಮದ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ನೇಮಕ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಬಳಿಕ ತಡೆಯಾಜ್ಞೆ ತೆರವಾಗಿತ್ತು.